ಬಸವರಾಜ ಹೊರಟ್ಟಿ 
ರಾಜ್ಯ

ಒಂದೇ ಕ್ಷೇತ್ರದಿಂದ 8ನೇ ಬಾರಿಗೆ ಪರಿಷತ್‌ಗೆ ಆಯ್ಕೆ: ಬಸವರಾಜ ಹೊರಟ್ಟಿಗೆ ಲಿಮ್ಕಾ ದಾಖಲೆ ಗರಿ!

ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರಿದೆ.

ಬೆಂಗಳೂರು: ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರಿದೆ.

ಬಸವರಾಜ ಹೊರಟ್ಟಿ ಅವರು ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾಗಿ ಕಳೆದ 43 ವರ್ಷಗಳಿಂದ ವಿಧಾನ ಪರಿಷತ್ತಿನ (MLC) ಸದಸ್ಯರಾಗಿದ್ದಾರೆ. ಭಾರತದ ರಾಜಕೀಯಕ್ಕೆ ಸಂಬಂಧಿಸಿದಂತೆ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ ಸಂಸ್ಥೆಯು ಪ್ರಕಟಿಸಿರುವ ಪುಸ್ತಕದಲ್ಲಿ ದೀರ್ಘಾವಧಿಗೆ ಚುನಾಯಿತ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿರುವ ಮೂವರು ರಾಜಕಾರಣಿಗಳ ಹೆಸರುಗಳನ್ನು ಪ್ರಕಟಿಸಲಾಗಿದೆ.

ಶಿಕ್ಷಕ ವೃತ್ತಿಯಿಂದ ರಾಜಕಾರಣಿಯಾಗಿ ಪರಿವರ್ತನೆಗೊಂಡ ಅವರು ಹಲವು ವರ್ಷಗಳಿಂದ ಜೆಡಿಎಸ್‌ನಲ್ಲಿದ್ದರು ಮತ್ತು ಮೇ 10 ರ ವಿಧಾನಸಭಾ ಚುನಾವಣೆಯ ಮೊದಲು ಬಿಜೆಪಿಗೆ ಸೇರಿದ್ದರು. ಆದರೆ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಹೊರಟ್ಟಿ ಅವರು 1980ರಿಂದ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಬುಧವಾರದವರೆಗೆ 43 ವರ್ಷ 201 ದಿನಗಳ ಕಾಲ ಒಂದೇ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ. ಈ ದಾಖಲೆ ನಿರ್ಮಿಸಿರುವುದಕ್ಕಾಗಿ ಅವರ ಹೆಸರನ್ನು ಲಿಮ್ಕಾ ದಾಖಲೆ ಪುಸ್ತಕದಲ್ಲಿ ಸೇರಿಸಲಾಗಿದೆ.

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರು 11 ಬಾರಿ ವಿಧಾನಸಭೆಗೆ ಚುನಾಯಿತರಾಗಿದ್ದರು, ಆದರೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾಗಿದ್ದರು. ಆದರೆ ಹೊರಟ್ಟಿಯವರು 1980ರಿಂದ ಇಲ್ಲಿಯವರೆಗಿನ ಎಲ್ಲಾ ಚುನಾವಣೆಗಳಲ್ಲಿ ಒಂದೇ ಕ್ಷೇತ್ರದಿಂದ ಗೆದ್ದಿರುವುದು ದಾಖಲೆಯಾಗಿದೆ.

 ವರ್ಷ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಹೆಸರನ್ನು ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿ ಪಟ್ಟಿ ಮಾಡಲಾಗಿದೆ ಎಂದು ಮಾಹಿತಿ ಇಲಾಖೆಯ ಪ್ರಕಟಣೆ ತಿಳಿಸಿದೆ, ಅವರು 24 ವರ್ಷ ಮತ್ತು 165 ದಿನಗಳ ಕಾಲ ಈ ಹುದ್ದೆಯನ್ನು ಅಲಂಕರಿಸಿದ್ದಾರೆ.

ಜ್ಯೋತಿ ಬಸು ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ 23 ವರ್ಷ 137 ದಿನಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT