ಶೃಂಗೇರಿ ಮಠದ ನೂತನ ಆಡಳಿತಾಧಿಕಾರಿ 
ರಾಜ್ಯ

ಶೃಂಗೇರಿ ಶಾರದಾಪೀಠಕ್ಕೆ ನೂತನ ಆಡಳಿತಾಧಿಕಾರಿಯಾಗಿ ಪಿಎ ಮುರಳಿ ನೇಮಕ 

ಶೃಂಗೇರಿ ಶಾರದಾಪೀಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. 

ಶೃಂಗೇರಿ: ಶೃಂಗೇರಿ ಶಾರದಾಪೀಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. 

ಜ.25 ರಿಂದ ಜಾರಿಗೆ ಬರುವಂತೆ ಪಿ.ಎ ಮುರಳಿ ಅವರನ್ನು ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತಾಧಿಕಾರಿಯನ್ನಾಗಿ ಜಗದ್ಗುರು ಭಾರತೀ ತೀರ್ಥ ಸ್ವಾಮಿಗಳು ನೇಮಕ ಮಾಡಿದ್ದಾರೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ. 

1986 ರಲ್ಲಿ ಈ ಹಿಂದಿನ ಜಗದ್ಗುರುಗಳಾಗಿದ್ದ ಅಭಿನವ ವಿದ್ಯಾತೀರ್ಥ ಸ್ವಾಮಿಗಳು ನೇಮಕ ಮಾಡಿದ್ದ ಗೌರಿ ಶಂಕರ್ ಅವರು ಮಠದ ಹಾಲಿ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುದೀರ್ಘ 35 ವರ್ಷಗಳ ಕಾಲ ಶ್ರೀಮಠದ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸಿದ ಗೌರಿ ಶಂಕರ್ ಅವರಿಗೆ ಫೆಬ್ರವರಿ 12ರಂದು ಮಠದಲ್ಲಿ ಅಭಿನಂದನಾ ಸಮಾರಂಭವನ್ನು ಸಹ ಆಯೋಜಿಸಲಾಗಿದೆ.  ಕಿರಿಯ ಶ್ರೀಗಳಾದ ವಿಧುಶೇಖರ ಭಾರತೀ ಸ್ವಾಮಿಗಳು ಸನ್ಯಾಸ ಸ್ವೀಕರಿಸಿ 9 ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಗೌರಿ ಶಂಕರ್ ಅವರು ಮಠದ ಆಡಳಿತಾಧಿಕಾರಿಗಳಿಗೆ ಮುಖ್ಯ ಸಲಹೆಗಾರರಾಗಿ ಮುಂದುವರೆಯಲಿದ್ದಾರೆ ಎಂದು ಶ್ರೀಮಠ ತಿಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT