ಸಾಂದರ್ಭಿಕ ಚಿತ್ರ 
ರಾಜ್ಯ

ಗಣರಾಜ್ಯೋತ್ಸವ: ರಾಜ್ಯದ 21 ಪೋಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಶುಕ್ರವಾರ 75ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್​ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ಗಮನಾರ್ಹ ಸೇವೆ ಗುರುತಿಸಿ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ. ಐಜಿಪಿ ಪ್ರವೀಣ್ ಮಧುಕರ್ ಪವಾರ್, ಐಜಿಪಿ ರಮಣ್ ಗುಪ್ತಾ, ಎಎಸ್​​ಪಿ ಅನಿಲ್​​ಕುಮಾರ್.ಎಸ್, ಎಸಿಪಿ ಶಿವಗಂಗೆ ಪುಟ್ಟರಂಗಪ್ಪ, ಡಿವೈಎಸ್​​ಪಿ ರಘು ಕುಮಾರ್, ಎಸಿಪಿ ನಾರಾಯಣಸ್ವಾಮಿ, ಡಿವೈಎಸ್​​ಪಿ ಶ್ರೀನಿವಾಸ್ ರಾಜ್ ಬೆಟೋಲಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಪೊಲೀಸ್​ ಇನ್ಸ್​​ಪೆಕ್ಟರ್​ ಮಾಸ್ತೇನಹಳ್ಳಿ ರಾಮಪ್ಪ ಹರೀಶ್, ಇನ್ಸ್​​ಪೆಕ್ಟರ್ ಸಣ್ಣ ರಂಗಪ್ಪ ವಿರೇಂದ್ರ ಪ್ರಸಾದ್, ಸಬ್​ ಇನ್ಸ್​​ಪೆಕ್ಟರ್ ದಾದಾಪೀರ್ ಕಣ್ಣೂರ್ ಸಾಬ್, ವೈರಲೆಸ್ ಎಎಸ್​ಐ​ ಸುರೇಶ್ ರಾಮಪ್ಪ ಪುಂಡಲಿಕಟ್ಟಿ, ಎಎಸ್ಐ ರಾಮ, ಎಸ್​​ಪಿ ಕಮಾಂಡೆಂಟ್ ಸಿಬ್ಬಂದಿ ನಾಗರಾಜ್ ಅಂಜಪ್ಪ, ಹೆಡ್​ ಕಾನ್ಸ್​ಟೇಬಲ್ ಸಿ.ವಿ.ಗೋವಿಂದರಾಜು, ಹೆಡ್​ ಕಾನ್ಸ್​ಟೇಬಲ್ ಮಣಿಕಂಠ ಮಂದರ್ ಬೈಲ್, ಎಎಸ್​ಐ​ ಸಮಂತ್.ಎಸ್, ಹೆಡ್​ ಕಾನ್ಸ್​ಟೇಬಲ್ ನರಸಿಂಹರಾಜು ಎಸ್.ಎನ್, ಎಸ್​ಐ ಪುಂಡಲಿಕ್ ಜೆ.ವಿ.ರಾಮರಾವ್ ನಾಯಕ್​ಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ವಿಶಿಷ್ಟ ಸೇವಾ ಪದಕ ಭಾರತೀಯ ಸಶಸ್ತ್ರ ಪಡೆಗಳಲ್ಲಿ ನೀಡುವ ಒಂದು ಪ್ರಶಸ್ತಿಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳ ಯಾವುದೇ ಶ್ರೇಣಿಗಳ ಹುದ್ದೆ ಹೊಂದಿರುವವರ ಉನ್ನತ ರೀತಿಯ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT