ಕೋಡಿ ಮಠದ ಶ್ರೀ 
ರಾಜ್ಯ

ಬಾಂಬ್ ದಾಳಿ, ಯುದ್ಧ, ಪ್ರವಾಹ, ಅಂತಾರಾಷ್ಟ್ರೀಯ ನಾಯಕರ ಸಾವು; 2024 ಕುರಿತು ಕೋಡಿ ಮಠದ ಶ್ರೀಗಳು ಹೇಳಿದ್ದೇನು?

ನಿರೀಕ್ಷೆಯಂತೆಯೇ ಸಂಕ್ರಾಂತಿ ಬಳಿಕ ಕೋಡಿ ಮಠದ ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು 2024ರ ಕುರಿತು ಭವಿಷ್ಯ ನುಡಿದಿದ್ದು, ಬಾಂಬ್ ದಾಳಿ, ಯುದ್ಧ, ಪ್ರವಾಹ, ಅಂತಾರಾಷ್ಟ್ರೀಯ ನಾಯಕರ ಸಾವಿನ ಕುರಿತು ಸುಳಿವು ನೀಡಿದ್ದಾರೆ.

ಬೆಂಗಳೂರು: ನಿರೀಕ್ಷೆಯಂತೆಯೇ ಸಂಕ್ರಾಂತಿ ಬಳಿಕ ಕೋಡಿ ಮಠದ ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು 2024ರ ಕುರಿತು ಭವಿಷ್ಯ ನುಡಿದಿದ್ದು, ಬಾಂಬ್ ದಾಳಿ, ಯುದ್ಧ, ಪ್ರವಾಹ, ಅಂತಾರಾಷ್ಟ್ರೀಯ ನಾಯಕರ ಸಾವಿನ ಕುರಿತು ಸುಳಿವು ನೀಡಿದ್ದಾರೆ.

ಹೌದು.. ಜಗತ್ತಿನ ಮುಂದಿನ ಆಗುಹೋಗುಗಳ ಬಗ್ಗೆ ಆಗಾಗ ಭವಿಷ್ಯವನ್ನು ನುಡಿಯುವ ಕೋಡಿ ಮಠದ ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು (Kodi Mutt Shri) ಈ ಬಾರಿಯೂ ತಮ್ಮ ಭವಿಷ್ಯ ನುಡಿದಿದ್ದು, ಈ ಬಾರಿ ಕೆಲ ಆತಂಕಕಾರಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಶ್ರೀಗಳ ಪ್ರಕಾರ, 2024ರಲ್ಲಿ ಸಾಕಷ್ಟು ವಿದ್ಯಮಾನಗಳು ನಡೆಯಲಿದ್ದು, ಜಗತ್ತು ಒಂದಷ್ಟು ಕೆಟ್ಟ ವಿಚಾರಗಳಿಂದ ನಲುಗಲಿದೆ. ಒಂದು ಕಡೆ ಅಕಾಲಿಕ ಮಳೆ ಸುರಿದು ಪ್ರವಾಹಗಳು ಸೃಷ್ಟಿಯಾಗಬಹುದು, ಬಾಂಬ್‌ ಸಿಡಿಯುವ ಸಂಭವವಿದೆ, ಯುದ್ಧಗಳ ಭೀತಿ ಇದೆ ಎಂದು ಶ್ರೀಗಳು ಹೇಳಿದರು.

2024 ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಅಕಾಲಿಕ ಮಳೆ. ಬಾಂಬ್ ಸಿಡಿಯುವ ಸಂಭವ. ಯುದ್ಧ ಭೀತಿ. ಜನರು ತಲ್ಲಣವಾಗುತ್ತಾರೆ. ಭೂಕಂಪನ. ಜಲ ಕಂಟಕ ಎದುರಾಗಲಿದೆ. ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ, ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣವಿದೆ. ಅಸ್ಥಿರತೆ, ಯುದ್ಧ ಭೀತಿ. ಅಣು ಬಾಂಬ್ ಸ್ಫೋಟವಾಗುವ ಅವಕಾಶವಿದೆ. ಜಗತ್ತಿಗೆ ವಿನಾಶ, ಜಗತ್ತಿಗೆ ಅಪಾಯ, ರೋಗ, ಸುನಾಮಿ ಹಾಗೂ ಮತೀಯ ಸಮಸ್ಯೆಯಿಂದ ಜನರು ದುಖಃ ಅನುಭವಿಸುತ್ತಾರೆ ಎಂದರು.

ಅಂತೆಯೇ ಭೂಕಂಪನ, ಜಲಕಂಟಕದಿಂದ ಜನರು ತಲ್ಲಣಗೊಳ್ಳುತ್ತಾರೆ. ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ ಎಂದು ಹೇಳಿದ್ದಾರೆ. ಅಲ್ಲದೆ ಅವರ ಪ್ರಕಾರ ಈ ವರ್ಷದಲ್ಲಿ ಜಗತ್ತಿನಲ್ಲಿ ಇಬ್ಬರು ಪ್ರಧಾನಿಗಳು ಸಾವು ಕಾಣಬಹುದು ಶಂಕಿಸಿದ್ದಾರೆ. ಅಲ್ಲದೆ ಜಗತ್ತಿಗೆ ವಿನಾಶ, ಜಗತ್ತಿಗೆ ಅಪಾಯ, ರೋಗ, ಸುನಾಮಿ ಹಾಗೂ ಮತೀಯ ಸಮಸ್ಯೆಯಿಂದ ಜನರು ದುಖಃ ಅನುಭವಿಸುತ್ತಾರೆ. ಅಂದರೆ ಜಗತ್ತಿನಲ್ಲಿ ಧರ್ಮಗಳ ನಡುವೆ ಸಂಘರ್ಷ ನಡೆಯುವ ಅಪಾಯವಿದೆ ಎಂದು ಶ್ರೀಗಳು ಹೇಳಿದ್ದಾರೆ.

ದೈವ ನಂಬುವುದೊಂದೇ ಪರಿಹಾರ
ಇನ್ನು ಈ ಸಮಸ್ಯೆಗಳಿಗೆಲ್ಲಾ ಪರಿಹಾರದ ವಿಚಾರವಾಗಿಯೂ ಮಾತನಾಡಿರುವ ಶ್ರೀಗಳು, ಜನರು ದೈವ ನಂಬುವುದೊಂದೇ ಪರಿಹಾರ, ದೈವ ಮೊರೆ ಹೋಗಬೇಕು ಎಂದು ಶ್ರೀಗಳು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT