ಪ್ರಾಂಜಲ್ 
ರಾಜ್ಯ

ಹುತಾತ್ಮ ಯೋಧ ಎಂ.ವಿ. ಪ್ರಾಂಜಲ್‌ ಗೆ ಮರಣೋತ್ತರವಾಗಿ "ಶೌರ್ಯ ಚಕ್ರ" ಪ್ರಶಸ್ತಿ!

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಕಳೆದ ನವೆಂಬರ್‌ನಲ್ಲಿ ದೇಶಕ್ಕಾಗಿ ಹೋರಾಡಿ ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಹೆಮ್ಮೆಯ ಕನ್ನಡಿಗ, ವೀರ ಯೋಧ ಕ್ಯಾಪ್ಟನ್  ಎಂ. ವಿ. ಪ್ರಾಂಜಲ್‌ ಅವರಿಗೆ ಮರಣೋತ್ತರವಾಗಿ "ಶೌರ್ಯ ಚಕ್ರ" ಪ್ರಶಸ್ತಿಯ ಗೌರವ ದೊರೆತಿದೆ. 

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಕಳೆದ ನವೆಂಬರ್‌ನಲ್ಲಿ ದೇಶಕ್ಕಾಗಿ ಹೋರಾಡಿ ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಹೆಮ್ಮೆಯ ಕನ್ನಡಿಗ, ವೀರ ಯೋಧ ಕ್ಯಾಪ್ಟನ್  ಎಂ. ವಿ. ಪ್ರಾಂಜಲ್‌ ಅವರಿಗೆ ಮರಣೋತ್ತರವಾಗಿ "ಶೌರ್ಯ ಚಕ್ರ" ಪ್ರಶಸ್ತಿಯ ಗೌರವ ದೊರೆತಿದೆ. 

ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು ಹುತಾತ್ಮರಾಗಿದ್ದರು. 28ರ ಹರೆಯದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಆಗಿದ್ದರು.

ಈ ವಿಷಯವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿಪಕ್ಷ ನಾಯಕ ಆರ್.ಅಶೋಕ್, ದೇಶದ ರಕ್ಷಣೆಯಲ್ಲಿ ಅವರ ಸಾಹಸ, ತ್ಯಾಗ, ಸಮರ್ಪಣೆಯನ್ನು ಸ್ಮರಿಸೋಣ ಎಂದಿದ್ದಾರೆ. 

ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಪ್ರಾಂಜಲ್ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರರಾಗಿದ್ದರು. ಎಂಆರ್​​ಪಿಎಲ್ ಡೆಲ್ಲಿ ಸ್ಕೂಲ್‌ನಲ್ಲಿ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿದ್ದರು. ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT