ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು. 
ರಾಜ್ಯ

ಗಣರಾಜ್ಯೋತ್ಸವ ಪರೇಡ್ ವೇಳೆ ಭದ್ರತಾ ಲೋಪ: ಸಿಎಂ ಬಳಿ ಏಕಾಏಕಿ ನುಗ್ಗಿದ ವ್ಯಕ್ತಿ ಪೊಲೀಸರ ವಶಕ್ಕೆ

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನುಗ್ಗಿ ಬರಲು ಯತ್ನ ನಡೆಸಿರುವ ಘಟನೆಯೊಂದು ಶುಕ್ರವಾರ ನಡೆದಿದೆ.

ಬೆಂಗಳೂರು: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನುಗ್ಗಿ ಬರಲು ಯತ್ನ ನಡೆಸಿರುವ ಘಟನೆಯೊಂದು ಶುಕ್ರವಾರ ನಡೆದಿದೆ.

ಮೈಸೂರು ಮೂಲದ ಪರಶುರಾಮ್​ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಕೆಪಿಎಸ್'ಸಿ ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಕೆಪಿಎಸ್'ಸಿ ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದಾರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT