ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕುಡಿದು ಬಸ್ ಚಲಾಯಿಸಿದ 9 ಮಂದಿ ಚಾಲಕರ ವಿರುದ್ಧ ಪ್ರಕರಣ ದಾಖಲು

ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ ನಗರದಲ್ಲಿ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ಕುಡಿದು ಖಾಸಗಿ ಬಸ್ ಚಾಲನೆ ಮಾಡುತ್ತಿದ್ದ 9 ಮಂದಿ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ ನಗರದಲ್ಲಿ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ಕುಡಿದು ಖಾಸಗಿ ಬಸ್ ಚಾಲನೆ ಮಾಡುತ್ತಿದ್ದ 9 ಮಂದಿ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಆನಂದ್ ರಾವ್ ವೃತ್ತ, ಮೌರ್ಯ ವೃತ್ತ, ಕಪಾಲಿ ರಸ್ತೆ, ಗಾಂಧಿ ನಗರ ಸೇರಿದಂತೆ ಖಾಸಗಿ ಬಗ್ ಗಳು ಹೆಚ್ಚಾಗಿ ಓಡಾಡುವ ವಿವಿಧ ಸ್ಥಳಗಳಲ್ಲಿ  ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ 8 ಗಂಟೆಯಿಂದ 11.30ರವರೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಈ ವೇಳೆ 881 ಖಾಸಗಿ ಬಸ್ ಗಳ ಚಾಲಕರನ್ನು ತಪಾಸಣೆ ನಡೆಸಿದಾಗ 9 ಮಂದಿ ಚಾಲಕರು ಮದ್ಯ ಸೇವಿಸಿ ಬಸ್ ಚಾಲನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಚಾಲಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಚಾಲನಾ ಪರವಾನಗಿ ಅಮಾನತು ಸೇರಿದಂತೆ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚೆಗಷ್ಟೇ ಸಂಚಾರಿ ಪೊಲೀಸರು ಶಾಲಾ ಬಸ್ ಚಾಲಕರು ಕುಡಿದು ವಾಹನ ಚಲಾಯಿಸುವವರ ವಿರುದ್ಧವೂ ಕ್ರಮ ಕೈಗೊಂಡಿದ್ದರು, 16 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT