ಪೊಲೀಸ್ ಆಯುಕ್ತ ಬಿ.ದಯಾನಂದ. 
ರಾಜ್ಯ

ಬೆಂಗಳೂರು: ತಲಘಟ್ಟಪುರ ಕಾವಲಿಗೆ ಹೈ ಡೆಫಿನಿಷನ್ ಕ್ಯಾಮೆರಾಗಳ ಅಳವಡಿಕೆ

ನಾಗರೀಕ ಸುರಕ್ಷತೆಗಾಗಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಚೇಂಜ್ ಮೇಕರ್ಸ್ ಆಫ್ ಕನಕಪುರ ರೋಡ್ ಅಸೋಸಿಯೇಷನ್ಸ್ ಹಾಗೂ ನಗರ ಪೊಲೀಸರು ಸಹಭಾಗಿತ್ವದಲ್ಲಿ ಸ್ಥಾಪಿಸಿರುವ ಗರುಡಾ ಸಿಸಿಟಿವಿ ಕಮಾಂಡ್ ಸೆಂಟರ್ ನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಉದ್ಘಾಟಿಸಿದರು.

ಬೆಂಗಳೂರು: ನಾಗರೀಕ ಸುರಕ್ಷತೆಗಾಗಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಚೇಂಜ್ ಮೇಕರ್ಸ್ ಆಫ್ ಕನಕಪುರ ರೋಡ್ ಅಸೋಸಿಯೇಷನ್ಸ್ ಹಾಗೂ ನಗರ ಪೊಲೀಸರು ಸಹಭಾಗಿತ್ವದಲ್ಲಿ ಸ್ಥಾಪಿಸಿರುವ ಗರುಡಾ ಸಿಸಿಟಿವಿ ಕಮಾಂಡ್ ಸೆಂಟರ್ ನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಉದ್ಘಾಟಿಸಿದರು.

ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಗರುಡ ಸಿಸಿಟಿವಿ ಯೋಜನೆಯಡಿ ಹೈ ಡೆಫಿನಿಷನ್ 5 ಎಂಪಿ ಐಟಿ ಸಾಮರ್ಥ್ಯವುಲ್ಳ 300 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 101 ಕ್ಯಾಮೆರಾಗಳನ್ನು ಹಾಕಲಾಗಿದೆ. ಇವುಗಳು ಠಾಣೆಯ ಕಮಾಂಡ್ ಸೆಂಟರ್'ಗೆ ಸಂಪರ್ಕ ಹೊಂದಿದ್ದು, ಕ್ಯಾಮೆರಾಗಳಲ್ಲಿ ಸೆರೆಯಾಗುವ ದೃಶ್ಯಾವಳಿಗಳು ಠಾಣೆಯಲ್ಲಿ ಅಳವಡಸಿರುವ 955 ಇಂಚಿನ ಎಲ್ಇಡಿ ಬೃಹತ್ ಪರದೆಯಲ್ಲಿ ನೇರಪ್ರಸಾರದಲ್ಲಿ ಬಿತ್ತರವಾಗಲಿದೆ. ಈ ಮೂಲಕ ತಲಘಟ್ಟಪುರ ಠಾಣಾ ಸರಹದ್ದಿನಲ್ಲಿ ಬಿಗಿಯಾದ ಖಾಕಿ ಕಣ್ಗಾವಲಿರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಪೊಲೀಸರು ಎಲ್ಲ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿ ಇರಲು ಸಾಧ್ಯವಿಲ್ಲ. ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಅಪರಾಧಗಳಿಗೆ ಕಡಿವಾಣ ಹಾಕಬೇಕಿದೆ’ ಎಂದು ದಯಾನಂದ್ ಅವರು ಹೇಳಿದರು.

ಸಿಎಂಕೆಆರ್‌ಎ ಕಾರ್ಯದರ್ಶಿ ವಿ.ಕೆ.ವತ್ಸ, ‘ಜನರ ಸುರಕ್ಷತೆ ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಡೆ ಕ್ಯಾಮೆರಾಗಳನ್ನು ಅಳವಡಿಸುವ ಯೋಚನೆ ಇದೆ’ ಎಂದು ತಿಳಿಸಿದರು.

ಸಿಎಂಕೆಆರ್‌ಎ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್  ಅವರು ಮಾತನಾಡಿ, ಯೋಜನೆಗೆ ತಲಘಟ್ಟಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎನ್ ಜಗದೀಶ್ ನೇತೃತ್ವದ ತಂಡ ಉತ್ತಮ ಬೆಂಬಲ ನೀಡಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT