ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಉಪನಗರ ರೈಲು ಯೋಜನೆ: 5.5 ಕಿಮೀ ವಿಸ್ತರಣೆ!

ಸಾರ್ವಜನಿಕರ ಬೇಡಿಕೆಗೆ ಮಣಿದು 148.17 ಕಿ.ಮೀ ಉದ್ದದ ಬೆಂಗಳೂರು ಉಪನಗರ ರೈಲು ಯೋಜನೆ ಯನ್ನು ಸರಿಸುಮಾರು 5.5 ಕಿಮೀ ವಿಸ್ತರಿಸಲು ನಿರ್ಧರಿಸಲಾಗಿದೆ.

ಬೆಂಗಳೂರು: ಸಾರ್ವಜನಿಕರ ಬೇಡಿಕೆಗೆ ಮಣಿದು 148.17 ಕಿ.ಮೀ ಉದ್ದದ ಬೆಂಗಳೂರು ಉಪನಗರ ರೈಲು ಯೋಜನೆ ಯನ್ನು ಸರಿಸುಮಾರು 5.5 ಕಿಮೀ ವಿಸ್ತರಿಸಲು ನಿರ್ಧರಿಸಲಾಗಿದೆ. ರಾಜಾನುಕುಂಟೆ- ಹೀಳಲಿಗೆ (ಕಾರಿಡಾರ್ 4) ವೈಟ್ ಫೀಲ್ಡ್-ಕೆಂಗೇರಿ (2) ಮಾರ್ಗದಲ್ಲಿ ವಿಸ್ತರಣೆಗೆ ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದ್ದು, ಇದೀಗ ಕೇಂದ್ರ ಸರ್ಕಾರದ ಅನುಮೋದನೆಯನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. 

ರಾಜ್ಯ ಸರ್ಕಾರದ ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಈ ಪ್ರಸ್ತಾವನೆಯನ್ನು ಯೋಜನೆ ಅನುಷ್ಠಾನಗೊಳಿಸುತ್ತಿರುವ ಕರ್ನಾಟಕ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸಸ್ (K-RIDE) ಅಂಗೀಕರಿಸಿದೆ. ಈಗ ಅದನ್ನು ನೈಋತ್ಯ ರೈಲ್ವೆ ಮೂಲಕ ರೈಲ್ವೆ ಮಂಡಳಿಯ ಒಪ್ಪಿಗೆಗಾಗಿ ಕಳುಹಿಸಲಾಗುತ್ತಿದೆ. 

ಹೀಳಲಿಗೆ (ಕನಕ ಮಾರ್ಗ) ಕಾರಿಡಾರ್ ನ್ನು ಚಂದಾಪುರವರೆಗೆ ಸುಮಾರು ಒಂದು ಕಿಮೀ ವಿಸ್ತರಿಸಲು DULT ಪ್ರಸ್ತಾಪಿಸಿದೆ. ಕೆಂಗೇರಿ ಮಾರ್ಗವನ್ನು (ಪಾರಿಜಾತ ಮಾರ್ಗ)  ಚಲ್ಲಘಟ್ಟ ಕಡೆಗೆ ವಿಸ್ತರಿಸಲಾಗುವುದು ಎಂದು ಕೆ-ರೈಡ್ ಮೂಲಗಳು ತಿಳಿಸಿವೆ. ಕಾರ್ಯಸಾಧ್ಯತೆಯ ಅಧ್ಯಯನದ ನಂತರವೇ ನಿಖರವಾದ ದೂರ ತಿಳಿಯಲಿದೆ. ಸದ್ಯಕ್ಕೆ ಸರಿಸುಮಾರು 4.5 ಕಿ.ಮೀ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು DULT ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ಹೋರಾಟಗಾರ ಪೃಥ್ವಿನ್ ರೆಡ್ಡಿ ಮಾತನಾಡಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ನಾರಾಯಣಸ್ವಾಮಿ ಅವರು ಇತ್ತೀಚಿಗೆ ಆನೇಕಲ್, ಹೀಳಲಿಗೆ ಮತ್ತು ಹುಸ್ಕೂರು ರೈಲು ನಿಲ್ದಾಣಗಳಿಗೆ ಭೇಟಿ ನೀಡಿದಾಗ ಉಪನಗರ ಮಾರ್ಗವನ್ನು ವಿಸ್ತರಿಸುವಂತೆ ಸ್ಥಳೀಯರು ಒತ್ತಾಯಿಸಿರುವುದಾಗಿ  ತಿಳಿಸಿದರು. 46.88-ಕಿಮೀ ಉದ್ದದ ಕನಕ ಮಾರ್ಗದ ಗುತ್ತಿಗೆಯನ್ನು ಇತ್ತೀಚೆಗೆ ಲಾರ್ಸನ್ ಮತ್ತು ಟೂರ್ಬೋ ಪ್ರೈವೇಟ್ ಲಿಮಿಟೆಡ್‌ಗೆ ನೀಡಲಾಯಿತು.

“ಈ ಪ್ರಸ್ತಾವಿತ ವಿಸ್ತರಣೆಗಳು 452-ಕಿಮೀ ಉದ್ದದ 2ನೇ ಹಂತದ ಯೋಜನೆಯಲ್ಲಿ ಕಾಣಿಸಿಕೊಂಡಿವೆ. ನಾವು ಕೈಗೊಳ್ಳಲು ಬಯಸಿದ ಪೂರ್ವ-ಕಾರ್ಯಸಾಧ್ಯತೆಯ ಅಧ್ಯಯನವನ್ನು ನವೆಂಬರ್ 2023 ರಲ್ಲಿ ನೈರುತ್ಯ ರೈಲ್ವೆ ತಿರಸ್ಕರಿಸಿದೆ. ಇದೇ ಪ್ರಸ್ತಾವನೆಯನ್ನು ಡಿಸೆಂಬರ್ 28, 2023 ರಂದು ನೈರುತ್ಯ ರೈಲ್ವೆಗೆ ಸಲ್ಲಿಸಿದ್ದು, ಮನವಿ ಮರುಪರಿಶೀಲಿಸುವಂತೆ ಕೋರಿರುವುದಾಗಿ ಕೆ- ರೈಡ್ ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ನೈರುತ್ಯ ರೈಲ್ವೆ (SWR) ಮತ್ತೊಮ್ಮೆ ಪ್ರಸ್ತಾವನೆಯನ್ನು ತಿರಸ್ಕರಿಸಿದರೆ, ಅವರ ರೈಲ್ವೆ ಮಂಡಳಿಗೆ ಹೊಸ ಪ್ರಸ್ತಾವನೆಯನ್ನು ಸಲ್ಲಿಸುತ್ತೇವೆ. ಈ ಹೆಚ್ಚುವರಿ 4.5 ಕಿ.ಮೀ. ವಿಸ್ತರಣೆಗೆ ರಾಜ್ಯದಿಂದ ಒಪ್ಪಿಗೆ ಸಿಕ್ಕಿದ್ದು, ಕೇಂದ್ರದಿಂದ ಅನುಮೋದನೆ ಸಿಗಬೇಕಾಗಿದೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT