ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ ಜೈಲಿನಲ್ಲಿ ಶ್ರೀರಾಮೋತ್ಸವ: ಕೈದಿಗಳ ನಡುವೆ ಮಾರಾಮಾರಿ, ವಿವಾದ ಸೃಷ್ಟಿ

ಕಾರಾಗೃಹದಲ್ಲಿ ಶ್ರೀರಾಮೋತ್ಸವ ಮಾಡಿದ್ದಕ್ಕೆ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ಘಟನೆ ಕುರಿತು ಕೈದಿ ಹಂಚಿಕೊಂಡಿರುವ ವಿಡಿಯೋವೊಂದು ವಿವಾದ ಸೃಷ್ಟಿಸಿದೆ.

ವಿಜಯಪುರ: ಕಾರಾಗೃಹದಲ್ಲಿ ಶ್ರೀರಾಮೋತ್ಸವ ಮಾಡಿದ್ದಕ್ಕೆ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ಘಟನೆ ಕುರಿತು ಕೈದಿ ಹಂಚಿಕೊಂಡಿರುವ ವಿಡಿಯೋವೊಂದು ವಿವಾದ ಸೃಷ್ಟಿಸಿದೆ.

ಘಟನೆಯ ಸಂಬಂಧ ಮಹಾರಾಷ್ಟ್ರ ಮೂಲದ ಪರಮೇಶ್ವರ ಎಂಬ ಆರೋಪಿ ವಿಡಿಯೋ ಬಿಡುಗಡೆ ಮಾಡಿದ್ದು, ಈ ವಿಡಿಯೋ ವಿವಾದ ಸೃಷ್ಟಿಸಿದೆ.

ಕಳೆದ 22 ರಂದು ರಾಮನ ಪೂಜೆಗೆ ಜೈಲು ಅಧಿಕಾರಿಗಳಿಗೆ ಅನುಮತಿಗಾಗಿ ಮನವಿ ಮಾಡಿದ್ದೆವು. ಆದರೆ, ಅಧಿಕಾರಿಗಳು ಅನುಮತಿ‌ ನೀಡಿರಲಿಲ್ಲ. ಆದರೂ ಜನವರಿ 22 ರಂದು ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ರಾಮನ ಪೂಜೆ ಮಾಡಿ ಪ್ರಸಾದ ಹಂಚಿದ್ದೆವು. ಅದಾದ ಮೇಲೆ ಜನವರಿ 23 ರಂದು ಸಹಾಯಕ ಜೈಲು ಅಧೀಕ್ಷಕ ಚೌಧರಿ ತಮ್ಮ ಚೇಂಬರ್ ಗೆ ನನ್ನನ್ನು ಹಾಗೂ ನನ್ನ ಜೊತೆಗೆ ಪೂಜೆ ಮಾಡಿದ ಇನ್ನೂ ಇಬ್ಬರನ್ನೂ ಕರೆಸಿ ವಿಚಾರಣೆ ನಡೆಸಿದರು.

ಈ ವೇಳೆ ಅನ್ಯಕೋಮಿನ ಆರೋಪಿ ಶೇಖ್ ಮೋದಿ ಹಾಗೂ ಇತರರರು ನಮ್ಮ ಮೇಲೆ ಹಲ್ಲೆ ಮಾಡಿದರು. ರಾಮನ ಪೂಜೆ ಮಾಡಿ ಪ್ರಸಾದ ವಿತರಣೆ ಮಾಡಿದ್ದಕ್ಕೆ ಹಲ್ಲೆ ಮಾಡಿದರು. ನಮ್ಮ ಮೇಲೆ ಹಲ್ಲೆ ಮಾಡಿದರೂ ಜೈಲು ಅಧಿಕಾರಿ ಸಿಬ್ಬಂದಿ ನಮ್ಮ ರಕ್ಷಣೆ ಮಾಡಿಲ್ಲ. ಬದಲಾಗಿ ಈಗ ನಮ್ಮನ್ನು ಜೈಲು ಆವರಣದಲ್ಲಿ ಬಿಡದೇ ಸೆಲ್ ನಲ್ಲಿಟ್ಟಿದ್ದಾರೆ.

ಈ ವಿಷಯವಾಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಮಗೆ ಸಹಾಯ ಮಾಡಬೇಕು ಎಂದು ಆರೋಪಿ ವಿಡಿಯೋದಲ್ಲಿ ಹೇಳಿರುವುದು ಕಂಡು ಬಂದಿದೆ.

ಆದರೆ. ರಾಮನ‌ ವಿಚಾರ ಇಟ್ಟುಕೊಂಡು ಆರೋಪಿ ಸುಳ್ಳು ಹೇಳುತ್ತಿದ್ದಾನೆಂದು ಕೇಂದ್ರ ಕಾರಾಗೃಹದ ಅಧೀಕ್ಷಕ ಐ ಜಿ ಮ್ಯಾಗೇರಿ ಪ್ರತಿಕ್ರಿಯಿಸಿದ್ದಾರೆ.

ಮಹಾರಾಷ್ಟ್ರದ ಜೈಲಿನಿಂದ ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಮೂವರು ಆರೋಪಿಗಳು ಬಂದಿದ್ದಾರೆ. ಮಹಾರಾಷ್ಟ್ರದ ಜೈಲಿನಲ್ಲಿ ಗಲಾಟೆ ಮಾಡಿದ ಕಾರಣ ಇಲ್ಲಿಗೆ ಕಳುಹಿಸಿದ್ದಾರೆ. ಈಗ ರಾಮ ಮಂದಿರ ಉದ್ಘಾಟನೆ ವಿಚಾರ ಮುಂದಿಟ್ಟು ಸುಳ್ಳು ಹೇಳುತ್ತಿದ್ದಾರೆಂದು ತಿಳಿಸಿದ್ದಾರೆ.

ಆದರೆ, ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಲಾಗಿದೆ. ಆದರೂ, ಕೈದಿ ಬಳಿ ಮೊಬೈಲ್ ಹೇಗೆ ಬಂದಿತ್ತು ಎಂಬುದರ ಬಗ್ಗೆ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಪೊಲೀಸ್ ಅಧೀಕ್ಷಕ ರಿಷಿಕೇಶ್ ಸೋನಾವಾನೆ ಅವರು, ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ.. "ಮೊಬೈಲ್ ಫೋನ್ ಕಾರಾಗೃಹದ ಒಳಗೆ ಹೇಗೆ ಹೋಯಿತು ಎಂಬುದನ್ನೂ ತನಿಖೆ ಮಾಡುತ್ತಿದ್ದೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

SCROLL FOR NEXT