ಕೆರಗೋಡು ಹನುಮ ಧ್ವಜ ವಿವಾದ 
ರಾಜ್ಯ

ಕೆರಗೋಡು ಹನುಮ ಧ್ವಜ ವಿವಾದ: ಪಂಚಾಯ್ತಿ ಪಿಡಿಓ ಅಮಾನತು

ಮಂಡ್ಯದ ಕೆರಗೋಡು (Keragodu) ಗ್ರಾಮದ ಹನುಮ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯ್ತಿ ಪಿಡಿಓ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಮಂಡ್ಯ: ಮಂಡ್ಯದ ಕೆರಗೋಡು (Keragodu) ಗ್ರಾಮದ ಹನುಮ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯ್ತಿ ಪಿಡಿಓ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಕೆರಗೋಡು (Keragodu) ಗ್ರಾಮದ ಹನುಮ ಧ್ವಜ ವಿವಾದ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಪ್ರತಿಭಟನೆ ವ್ಯಾಪಕವಾಗಿರುವಂತೆಯೇ ಇದೀಗ ಸರ್ಕಾರದ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಿದೆ. 

ಮೂಲಗಳ ಪ್ರಕಾರ ಐದು ಕಾರಣಗಳನ್ನು ನೀಡಿ ಪಿಡಿಓ‌ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ತನ್ವೀರ್ ಆಶೀಫ್ ಸೇಠ್ ಆದೇಶ ಹೊರಡಿಸಿದ್ದಾರೆ.

ಅಮಾನತು ಆದೇಶದಲ್ಲಿರುವಂತೆ ಗ್ರಾಮ ಪಂಚಾಯಿತಿ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯ. ಆದರೆ, ಸದರಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಿ ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಪಿಡಿಓ ನೇರ ಕಾರಣ ಎಂದು ಆರೋಪಿಸಲಾಗಿದೆ.

ಅಲ್ಲದೆ ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಕರ್ತವ್ಯ ಲೋಪ ಎಸಗಲಾಗಿದ್ದು, ಧ್ವಜ ಸ್ತಂಭದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲು ಅನುಮತಿ ನೀಡಿ, ಷರತ್ತು ಉಲ್ಲಂಘಿಸಿದ್ರು ಕ್ರಮಕೈಗೊಳ್ಳದೆ ನಿರ್ಲಕ್ಷಿಸಲಾಗಿದೆ. ರಾಷ್ಟ್ರ ಧ್ವಜದ ಬದಲು ಹನುಮ ಧ್ವಜ‌ ಹಾರಿಸಲು ಅವಕಾಶ ನೀಡಿರುವುದು ಮತ್ತು ಹನುಮ‌ ಧ್ವಜ‌ಹಾರಿಸಿದ್ದರು ಯಾವುದೇ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಎಸಗಲಾಗಿದೆ ಎಂದು ಆರೋಪಿಸಿ ಅಮಾನತು ಮಾಡಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!