ಗೃಹ ಸಚಿವ ಪರಮೇಶ್ವರ್ 
ರಾಜ್ಯ

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ: ಗೃಹ ಸಚಿವ ಪರಮೇಶ್ವರ್

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ.

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ‌ ನೀಡಿರಲಿಲ್ಲ. ಹಾಗಾಗಿ ಪಂಚಾಯಿತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದಾರೆಂದು ಹೇಳಿದರು.

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ. ಇದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸರ್ಕಾರಿ ಕಟ್ಟಡಗಳ ಬದಲಿಗೆ ದೇವಸ್ಥಾನಗಳು ಮತ್ತು ಖಾಸಗಿ ಸ್ಥಳಗಳಲ್ಲಿ ಜನರು ಕೇಸರಿ ಧ್ವಜ ಹಾರಿಸಲಿ. ಅದಕ್ಕೆ ಯಾವುದೇ ತಕರಾರು ಇರುವುದಿಲ್ಲ. ಆದರೆ, ಸರ್ಕಾರಿ ಜಾಗದಲ್ಲಿ ಹಾರಿಸಬಾರದು. ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕಾಂಗ್ರೆಸ್‌ನವರು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ನಾವು ಕೂಡ ಹಿಂದೂಗಳೇ, ಕಾನೂನಿನ ಚೌಕಟ್ಟಿನಲ್ಲಿರಿ ಎಂದು ನಾವು ಹೇಳುತ್ತಿದ್ದೇವೆ. ಅಷ್ಟೇ ವ್ಯತ್ಯಾಸ ನಮಗೂ, ಅವರಿಗೂ. ಈ ರಾಜ್ಯದಲ್ಲಿ ಕಾನೂನಿದೆ, ಕಾನೂನನ್ನ ಮುರಿಯುವ ಕೆಲಸ ಮಾಡಬೇಡಿ ಎಂದು ನಾವು ಹೇಳುತ್ತಿದ್ದೇವೆ. ಅವರು ರಾಜಕೀಯ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಕೂಡ ಅಂಥದ್ದೇ ಒಂದು ಘಟನೆ. ಅದು ಪೂರ್ವನಿಯೋಜಿತನೋ, ಏನೋ ಅನ್ನೋದು ನನಗೆ ಗೊತ್ತಿಲ್ಲ. ಅವರು ಅನುಮತಿ ಪಡೆದಿದ್ದೆ ಬೇರೆಯದಕ್ಕೆ, ಮಾಡಿದ್ದೆ ಬೇರೆ ಎಂದು ಹೇಳಿದರು.

ರಾಷ್ಟ್ರಧ್ವಜ ಹಾಕುತ್ತೇವೆ ಎಂದು ಊರಿನವರೆಲ್ಲ ಹೇಳಿದ್ದು ಒಳ್ಳೆಯದೇ. ಆದರೆ ನಂತರ ಬೇರೆಯ ಧ್ವಜವನ್ನ ಹಾಕಿದ್ದಾರೆ. ಅದಾದ ಬಳಿಕ ಬೇರೆ ಬೇರೆಯವರು ಬೇರೆ ಧ್ವಜ ಹಾಕುತ್ತೇವೆ ಎಂದು ಹೇಳಿದ್ದಾರೆ. ಕೆಲವರು ಅಂಬೇಡ್ಕರ್, ಕೆಲವರು ಕೆಂಪೇಗೌಡ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಶಾಂತಿ ಕದಡುವ ಕೆಲಸ ಆಗಬಾರದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT