ಪ್ರತಿಭಟನಾಕಾರರ ಮನವೊಲಿಸುತ್ತಿರುವ ಪೊಲೀಸರು. 
ರಾಜ್ಯ

ಹನುಮ ಧ್ವಜ ಘರ್ಷಣೆ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ, ರಾಜ್ಯದಾದ್ಯಂತ ಪ್ರತಿಭಟನೆಗೆ ಬಿಜೆಪಿ ಮುಂದು

ಮಂಡ್ಯದ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದು ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ.

ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದು ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ.

ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಕೆರಗೋಡಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಮಧ್ಯೆ ಘಟನೆ ಖಂಡಿಸಿ ಇಂದು ಕೆರಗೋಡಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.

ಫೆ.9ರಂದು ಮಂಡ್ಯ ನಗರ ಬಂದ್'ಗೆ ಹಿಂದೂ ಪರ ಸಂಘಟನೆಗಳೂ ಕರೆ ಕೊಟ್ಟಿವೆ. ಜನರ ಹೋರಾಟಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ ಘೋಷಣೆ ಮಾಡಿರುವುದರಿಂದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.

ಈ ನಡುವೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ-ಜೆಡಿಎಸ್ ನಾಯಕರು ಭಾನುವಾರ ಕೆರಗೋಡಿಯಲ್ಲಿ ಪ್ರತಿಭಟನೆ ನಡೆಸಿದರು. ಹನುಮಧ್ವಜ ಹಾರಿಸುವ ಉದ್ದೇಶದಿಂದ ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದಾಗ ಅಶೋಕ್ ಸೇರಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಲಾಯಿತು.

ಆಗಿದ್ದೇನು?
ಮಂಡ್ಯ ಜಿಲ್ಲೆ ಕೆರಗೋಡು ಎಂಬಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು 108 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಹನುಮ ಧ್ವಜ ವನ್ನು ಹಾರಿಸಿದ್ದರು. ಈ ಧ್ವಜವನ್ನು ತೆರವುಗೊಳಿಸಿದ ಪೊಲೀಸರ ಕ್ರಮ ಈಗ ಟೀಕೆಗೆ ಒಳಗಾಗಿದ್ದು, ಪ್ರತಿಭಟನೆಯೂ ವ್ಯಕ್ತವಾಗಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ನಿಮಿತ್ತ ಜನವರಿ 22ರಂದು ಕೆರೆಗೋಡು ಗ್ರಾಮಸ್ಥರು ಗ್ರಾಮದ 108 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಹನುಮ ಧ್ವಜ ಹಾರಿಸಲು ತೀರ್ಮಾನಿಸಿದರು. ಗ್ರಾಮ ಪಂಚಾಯಿತಿಗೆ ಈ ಕುರಿತು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ಮೂಲಕ ಮನವಿಯನ್ನೂ ಸಲ್ಲಿಸಿದರು. ಆದರೆ, ಗ್ರಾಮ ಪಂಚಾಯಿತಿಯು “ರಾಷ್ಟ್ರ ಧ್ವಜ ಮತ್ತು ನಾಡಧ್ವಜ” ಹೊರತುಪಡಿಸಿ ಯಾವುದೇ ಧಾರ್ಮಿಕ/ ರಾಜಕೀಯ ಧ್ವಜವನ್ನು ಹಾರಿಸುವಂತಿಲ್ಲ ಎಂಬ ಒಕ್ಕಣೆಯೊಂದಿಗೆ ಜನವರಿ 19ರಂದು ಅನಮತಿ ಪತ್ರ ನೀಡಿದೆ. ಆದಾಗ್ಯೂ, ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ಹನುಮ ಧ್ವಜವನ್ನು ಹಾರಿಸಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೆ, ಗ್ರಾಮ ಪಂಚಾಯಿತಿಯ ಅಧೀನದ ಧ್ವಜಸ್ತಂಭದಲ್ಲಿ ಹನುಮ ಧ್ವಜ ಹಾರಿಸಿದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಈ ವಿಚಾರ ಗ್ರಾಮ ಪಂಚಾಯತ್​ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿತ್ತು. 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಗ್ರಾಮ ಪಂಚಾಯತ್​ ಸದಸ್ಯರು ನಡಾವಳಿ ರಚಿಸಿ, ವಿವಾದ ಇತ್ಯರ್ಥ ಪಡಿಸಿದ್ದರು.

ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಲಾಗಿದೆ ಇದನ್ನು ತೆರವುಗೊಳಿಸಬೇಕು ಎಂದು ಮಂಡ್ಯ ಜಿಲ್ಲಾಡಳಿತವು ತಾಲೂಕು ಆಡಳಿತಕ್ಕೆ ಮೌಖಿಕ ಆದೇಶ ನೀಡಿತ್ತು. ಅದರಂತೆ ಹನುಮ ಧ್ವಜ ತೆರವು ಮಾಡಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಅವರು ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಆಗಮಿಸಿದ್ದರು. ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಕಾರಣ, ಹನುಮ ಧ್ವಜ ಇಳಿಸದೇ ಅವರು ಶನಿವಾರ (ಜ.27) ರಾತ್ರಿ ಹಿಂದಿರುಗಿದ್ದರು.

ಆದರೆ, ಜನವರಿ 28ರ ನಸುಕಿನ ಜಾವ 3 ಗಂಟೆಗೆ ಗ್ರಾಮಕ್ಕೆ ಮಂಡ್ಯ ಎಸಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಆಗಮಿಸಿ ಧ್ವಜ‌ ತೆರವುಗೊಳಿಸಲು ಯತ್ನಿಸಿದ್ದರು. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು. ಅಧಿಕಾರಿಗಳ ವಿರುದ್ಧ ಪ್ರತಿಭಟಿಸಿದರು. ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರಾದರೂ ಫಲ ನೀಡಲಿಲ್ಲ. ಕೂಡಲೆ ಗ್ರಾಮದಲ್ಲಿ 144 ಸೆಕ್ಷನ್​ ಜಾರಿಗೊಳಿಸಿ, ಗುಂಪು ಚದುರಿಸಲು ಲಾಠಿ ಚಾರ್ಜ್​ ಮಾಡಲಾಯಿತು. ಇಷ್ಟಾದ ಬಳಿಕ ಪೊಲೀಸರು ಹನುಮ ಧ್ವಜವನ್ನು ತೆರವುಗೊಳಿಸಿದರು.

ಇದು ಗ್ರಾಮಸ್ಥರನ್ನು ಕೆರಳಿಸಿತು. ಗ್ರಾಮಸ್ಥರು ಮತ್ತೆ ಬೀದಿಗಿಳಿದು ರಸ್ತೆಯಲ್ಲೇ ಅಡುಗೆ ಮಾಡುತ್ತ ಪ್ರತಿಭಟನೆ ನಡೆಸಲು ಮುಂದಾದರು. ಈ ಹಂತದಲ್ಲಿ ಪೊಲೀಸರು ಗ್ರಾಮಸ್ಥರು ತಂದಿದ್ದ ನೀರನ್ನು ರಸ್ತೆ ಸುರಿದು ಅವರನ್ನು ಚದುರಿಸಲು ಪ್ರಯತ್ನಿಸಿದರು. ಇದೇ ವೇಳೆ, ಗ್ರಾಮಸ್ಥರು ಶಾಸಕ ರವಿಕುಮಾರ್ ಅವರ ಫ್ಲೆಕ್ಸ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರಹಾಕಿದರು. ಇಷ್ಟಾದ ಬಳಿಕ ಗ್ರಾಮಸ್ಥರು, ಹಿಂದೂ ಕಾರ್ಯಕರ್ತರು ಸಭೆ ನಡೆಸಿ ಮನೆ-ಮನೆಗೆ ಹನುಮ ಧ್ವಜ ನೀಡಿ, ಪ್ರತಿ ಮನೆಯ ಮೇಲೂ ಹನುಮ ಧ್ವಜ ಹಾರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಬುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT