ಎನ್ ಎ ಹ್ಯಾರಿಸ್ ಗೆ ಡಿ ಕೆ ಶಿವಕುಮಾರ್ ಅಭಿನಂದನೆ 
ರಾಜ್ಯ

ಬಿಡಿಎ ಅಧ್ಯಕ್ಷರಾಗಿ ಎನ್ಎ ಹ್ಯಾರಿಸ್ ಅಧಿಕಾರ ಸ್ವೀಕಾರ

ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (BDA) ನೂತನ ಅಧ್ಯಕ್ಷರಾಗಿ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ (NA Haris) ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (BDA) ನೂತನ ಅಧ್ಯಕ್ಷರಾಗಿ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ (NA Haris) ಅಧಿಕಾರ ವಹಿಸಿಕೊಂಡಿದ್ದಾರೆ.

ನಿಗಮ ಮಂಡಳಿ ಅಧ್ಯಕ್ಷರ ಮೊದಲ ಪಟ್ಟಿಯಲ್ಲಿ ಹ್ಯಾರೀಸ್ ಆಯ್ಕೆ ಆಗಿದ್ದರು.  ಒಟ್ಟು 36 ಶಾಸಕರಿಗೆ ವಿವಿಧ ನಿಗಮ-ಮಂಡಳಿಗಳಲ್ಲಿ ಸ್ಥಾನ ಸಿಕ್ಕಿದ್ದು ಬಿಡಿಎ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್  ಅವರ ಸಮ್ಮುಖದಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಬಿಡಿಎ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಶಾಸಕ ಜಮೀರ್ ಅಹ್ಮದ್ ಕೂಡ ಕಚೇರಿಗೆ ಆಗಮಿಸಿ ಶುಭ ಕೋರಿದರು.

ಬಿಡಿಎ ನೂತನ ಅಧ್ಯಕ್ಷರಾಗಿ ಎನ್.ಎ. ಹ್ಯಾರಿಸ್ ನೇಮಕಗೊಂಡ ಬಳಿಕ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು ಶುಭ ಕೋರಿದ್ದಾರೆ.

ಬೆಂಗಳೂರು ನಗರದ ಬಗ್ಗೆ ನನಗೆ ಗೊತ್ತಿದೆ. ಈಗಾಗಲೇ ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಟ್ರಾನ್ಸ್ಫರೆನ್ಸಿ ತರುವಲ್ಲಿ ಪ್ರಯತ್ನಿಸುತ್ತೇನೆ. ಬಿಡಿಎ ಯನ್ನು ಜನಸ್ನೇಹಿ ಮಾಡಲು ಯತ್ನಿಸುತ್ತೇನೆ. ಸಿಎಂ, ಡಿಸಿಎಂ, ಬಿಡಿಎ ಜನಸ್ನೇಹಿ ಮಾಡಿ ಎಂದಿದ್ದಾರೆ. ಹೊಸ ಲೇಔಟ್ ಬಗ್ಗೆಯೂ ಯೋಜನೆ ಇದೆ ಎಂದು ತಿಳಿಸಿದರು.

ಶಾಂತಿನಗರ ಅಭಿವೃದ್ಧಿಯಾಗಿಲ್ಲ ಈಗ ನಿಮ್ಮನ್ನ ಬಿಡಿಎ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಹ್ಯಾರಿಸ್, ರಾಜಕೀಯವಾಗಿ ಮಾತನಾಡಿದರೆ ನಾನು ರಾಜಕೀಯ ಮಾತನಾಡ್ತೇನೆ. ಬೆಂಗಳೂರು‌ ಎಲ್ಲವೂ ಬಿಡಿಎ ನಲ್ಲಿ ಬರಲ್ಲ. ಎಲ್ಲರ ಸಲಹೆಯನ್ನ ತೆಗೆದುಕೊಂಡು ಕೆಲಸ ಮಾಡ್ತೇನೆ. ಬಿಡಿಎಯನ್ನ ಇನ್ನಷ್ಟು ಅಭಿವೃದ್ಧಿ ಮಾಡ್ತೇವೆ. ಸಂಪನ್ಮೂಲಗಳ‌ ಕ್ರೋಢೀಕರಣಕ್ಕೆ ಮುಂದಾಗುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!