ನಾಗನಗೌಡ ಕಂದಕೂರ 
ರಾಜ್ಯ

ಯಾದಗಿರಿ: ಮಾಜಿ ಶಾಸಕ ನಾಗನಗೌಡ ಕಂದಕೂರ ಹೃದಯಾಘಾತದಿಂದ ನಿಧನ

ಗುರುಮಿಠಕಲ್​ ಕ್ಷೇತ್ರದ ಜೆಡಿಎಸ್​ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆ: ಗುರುಮಿಠಕಲ್​ ಕ್ಷೇತ್ರದ ಜೆಡಿಎಸ್​ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಯಾದಗಿರಿ ನಗರದ ಅವರ ನಿವಾಸದಲ್ಲಿದ್ದಾಗ ಭಾನುವಾರ ಬೆಳಿಗ್ಗೆ 11-30ರ ವೇಳೆಗೆ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರು. 'ಆದರೆ, ಅವರು ಉಳಿಯಲಿಲ್ಲ' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ, ಪುತ್ರರಾದ ಶಾಸಕ ಶರಣಗೌಡ ಕಂದಕೂರ, ಉದ್ಯಮಿ ಮಲ್ಲಿಕಾರ್ಜುನರೆಡ್ಡಿ (ರಾಜುಗೌಡ) ಹಾಗೂ ಒಬ್ಬ ಪುತ್ರಿ ಇದ್ದಾರೆ.

ಜೆಡಿಎಸ್​ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನಾಗನಗೌಡ ಕಂದಕೂರ್​ ಅವರು 2018ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಗುರುಮಿಠಕಲ್​ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 023ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ನಂತರ ಅವರ ಪುತ್ರ ಶರಣಗೌಡ ಕಂದಕೂರ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಗುರುಮಿಠಕಲ್ ಕ್ಷೇತ್ರದ ಶಾಸಕರಾಗಿ ಶರಣಗೌಡ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT