ನಾಗನಗೌಡ ಕಂದಕೂರ 
ರಾಜ್ಯ

ಯಾದಗಿರಿ: ಮಾಜಿ ಶಾಸಕ ನಾಗನಗೌಡ ಕಂದಕೂರ ಹೃದಯಾಘಾತದಿಂದ ನಿಧನ

ಗುರುಮಿಠಕಲ್​ ಕ್ಷೇತ್ರದ ಜೆಡಿಎಸ್​ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆ: ಗುರುಮಿಠಕಲ್​ ಕ್ಷೇತ್ರದ ಜೆಡಿಎಸ್​ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಯಾದಗಿರಿ ನಗರದ ಅವರ ನಿವಾಸದಲ್ಲಿದ್ದಾಗ ಭಾನುವಾರ ಬೆಳಿಗ್ಗೆ 11-30ರ ವೇಳೆಗೆ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರು. 'ಆದರೆ, ಅವರು ಉಳಿಯಲಿಲ್ಲ' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ, ಪುತ್ರರಾದ ಶಾಸಕ ಶರಣಗೌಡ ಕಂದಕೂರ, ಉದ್ಯಮಿ ಮಲ್ಲಿಕಾರ್ಜುನರೆಡ್ಡಿ (ರಾಜುಗೌಡ) ಹಾಗೂ ಒಬ್ಬ ಪುತ್ರಿ ಇದ್ದಾರೆ.

ಜೆಡಿಎಸ್​ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನಾಗನಗೌಡ ಕಂದಕೂರ್​ ಅವರು 2018ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಗುರುಮಿಠಕಲ್​ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 023ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ನಂತರ ಅವರ ಪುತ್ರ ಶರಣಗೌಡ ಕಂದಕೂರ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಗುರುಮಿಠಕಲ್ ಕ್ಷೇತ್ರದ ಶಾಸಕರಾಗಿ ಶರಣಗೌಡ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT