ನಾಗನಗೌಡ ಕಂದಕೂರ 
ರಾಜ್ಯ

ಯಾದಗಿರಿ: ಮಾಜಿ ಶಾಸಕ ನಾಗನಗೌಡ ಕಂದಕೂರ ಹೃದಯಾಘಾತದಿಂದ ನಿಧನ

ಗುರುಮಿಠಕಲ್​ ಕ್ಷೇತ್ರದ ಜೆಡಿಎಸ್​ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆ: ಗುರುಮಿಠಕಲ್​ ಕ್ಷೇತ್ರದ ಜೆಡಿಎಸ್​ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಯಾದಗಿರಿ ನಗರದ ಅವರ ನಿವಾಸದಲ್ಲಿದ್ದಾಗ ಭಾನುವಾರ ಬೆಳಿಗ್ಗೆ 11-30ರ ವೇಳೆಗೆ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರು. 'ಆದರೆ, ಅವರು ಉಳಿಯಲಿಲ್ಲ' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ, ಪುತ್ರರಾದ ಶಾಸಕ ಶರಣಗೌಡ ಕಂದಕೂರ, ಉದ್ಯಮಿ ಮಲ್ಲಿಕಾರ್ಜುನರೆಡ್ಡಿ (ರಾಜುಗೌಡ) ಹಾಗೂ ಒಬ್ಬ ಪುತ್ರಿ ಇದ್ದಾರೆ.

ಜೆಡಿಎಸ್​ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನಾಗನಗೌಡ ಕಂದಕೂರ್​ ಅವರು 2018ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಗುರುಮಿಠಕಲ್​ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 023ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ನಂತರ ಅವರ ಪುತ್ರ ಶರಣಗೌಡ ಕಂದಕೂರ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಗುರುಮಿಠಕಲ್ ಕ್ಷೇತ್ರದ ಶಾಸಕರಾಗಿ ಶರಣಗೌಡ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT