ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಯತ್ನಾಳ್‌ ಕುಟುಂಬ ಒಡೆತನದ ಸಿದ್ಧಸಿರಿ ಎಥೆನಾಲ್‌ ಮತ್ತು ಪವರ್‌ ಪ್ಲಾಂಟ್ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬ ಒಡೆತನದ ಸಿದ್ಧಸಿರಿ ಎಥೆನಾಲ್‌ ಮತ್ತು ಪವರ್‌ ಪ್ಲಾಂಟ್ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬ ಒಡೆತನದ ಸಿದ್ಧಸಿರಿ ಎಥೆನಾಲ್‌ ಮತ್ತು ಪವರ್‌ ಪ್ಲಾಂಟ್ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಹೊರ ವಲಯದಲ್ಲಿರುವ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್‌ ಯತ್ನಾಳ್‌ ಕುಟುಂಬದ ಒಡೆತನ ಇರುವ ಸಿದ್ಧಸಿರಿ ಎಥೆನಾಲ್‌ ಮತ್ತು ಪವರ್‌ ಪ್ಲಾಂಟ್ ಮುಚ್ಚುವ ಸಂಬಂಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೀಡಿದ್ದ ನೋಟಿಸ್‌ಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. ಯತ್ನಾಳ್‌ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕರಾಗಿರುವ ರಮಣಗೌಡ ಬಿ ಪಾಟೀಲ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು, ಕಲಬುರ್ಗಿ ವಲಯದ ಪರಿಸರ ಅಧಿಕಾರಿ ಹಾಗೂ ಹಿರಿಯ ಪರಿಸರ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ. ಅರ್ಜಿದಾರರ ಪರ ವಕೀಲರು ಕೆಎಸ್‌ಪಿಸಿಬಿ ವಕೀಲ ಗುರುರಾಜ್‌ ಎಸ್‌. ಜೋಶಿ ಅವರಿಗೆ ಅರ್ಜಿಯ ಪ್ರತಿ ಹಂಚಬಹುದು. ಅರ್ಜಿದಾರರ ಕೋರಿಕೆಯಂತೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

ಸಿದ್ಧಸಿರಿ ಎಥೆನಾಲ್‌ ಮತ್ತು ಪವರ್‌ ಘಟಕ ಮುಚ್ಚುವಂತೆ ಕಲಬುರ್ಗಿ ವಲಯದ ಹಿರಿಯ ಪರಿಸರ ಅಧಿಕಾರಿ ಜನವರಿ 18ರಂದು ನೋಟಿಸ್‌ ಜಾರಿ ಮಾಡಿದ್ದರು. ಆನಂತರ ಕೆಎಸ್‌ಪಿಸಿಬಿ ಅಧ್ಯಕ್ಷರು ಜನವರಿ 25ರಂದು ಆದೇಶ ಮಾಡಿದ್ದರು. ಈ ಎರಡೂ ಆದೇಶವನ್ನು ವಜಾ ಮಾಡಬೇಕು ಎಂಬುದು ಅರ್ಜಿದಾರರ ಕೋರಿಕೆಯಾಗಿದೆ. ಮಧ್ಯಂತರ ಪರಿಹಾರದ ಭಾಗವಾಗಿ ಕೆಎಸ್‌ಪಿಸಿಬಿ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT