ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನ ಮಲ್ಲೇಶ್ವರದಲ್ಲಿ 1.11 ಕೋಟಿ ರೂ ವೆಚ್ಚದಲ್ಲಿ ರಾಜೀವ್ ಗಾಂಧಿ ಪ್ರತಿಮೆ ಸ್ಥಾಪನೆ!

ನಗರದ ಹೃದಯ ಭಾಗದಲ್ಲಿರುವ ಮಲ್ಲೇಶ್ವರದ ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣದ ಬಳಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ಅಂದಾಜು 1.11 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆಯೆತ್ತಲಿದೆ.

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಮಲ್ಲೇಶ್ವರದ ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣದ ಬಳಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ಅಂದಾಜು 1.11 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆಯೆತ್ತಲಿದೆ. ಕಾಂಕ್ರೀಟ್ ಪ್ರತಿಮೆಗೆ ಬದಲಾಗಿ ಹೊಸ ಪ್ರತಿಮೆ ನಿರ್ಮಾಣವಾಗಲಿದೆ. ಸುಭಾಷ್ ನಗರ ಜಂಕ್ಷನ್ ಅಥವಾ ರಾಜೀವ್ ಗಾಂಧಿ ಚೌಕ್ ಎಂದು ಕರೆಯಲಾಗುವ, ಈ ಸ್ಥಳವು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಡಿಯಲ್ಲಿ ಬರುತ್ತದೆ.

15ನೇ ಹಣಕಾಸು ಆಯೋಗದ ಕಾರ್ಯಕ್ರಮದಡಿ ಅಭಿವೃದ್ಧಿ ಕಾಮಗಾರಿಗಳಿಗೆ ಕೈಗೆತ್ತಿಕೊಂಡ 25 ಜಂಕ್ಷನ್‌ಗಳಲ್ಲಿ ಸುಭಾಷ್ ನಗರವೂ ಒಂದಾಗಿದ್ದು, ಪ್ರತಿಮೆಯ ವೆಚ್ಚವನ್ನು ಬಿಬಿಎಂಪಿ ಸ್ವಂತವಾಗಿ ಭರಿಸಲಿದೆ. ಈ ಹಿಂದೆ ಜಂಕ್ಷನ್‌ನಲ್ಲಿ ಸ್ಥಾಪಿಸಲಾಗಿದ್ದ ಕಾಂಕ್ರೀಟ್ ಮೂರ್ತಿಯನ್ನು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮಗಾರಿಯನ್ನು ಪಾಲಿಕೆಯ ಟ್ರಾಫಿಕ್ ಇಂಜಿನಿಯರಿಂಗ್ ಸೆಲ್‌ಗೆ ವಹಿಸಲಾಗಿದೆ – ಸಿಂಗಲ್ ಬಿಡ್ಡರ್ ಆಗಿದ್ದ ಕಲ್ಯಾಣ್ ಇನ್‌ಫ್ರಾ ಪ್ರಾಜೆಕ್ಟ್ಸ್‌ಗೆ ನೀಡಲಾಗಿದೆ.

ಇದಕ್ಕೆ ಬಿಜೆಪಿಯ ಹಲವು ನಾಯಕರು ಟೀಕಿಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ. ಆದರೆ ನಮ್ಮ ನೆಲ ಮತ್ತು ಸಂಸ್ಕೃತಿಯನ್ನು ಅವಮಾನಿಸಿದರೂ ಅವರ ರಾಜಕೀಯ ಯಜಮಾನರನ್ನು ಮೆಚ್ಚಿಸಲು ಎಲ್ಲಾ ಹಣ ಲಭ್ಯವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT