ಆರ್ ಅಶೋಕ್ 
ರಾಜ್ಯ

ಹನುಮ ಧ್ವಜ ಹಾರಿಸುವವರೆಗೂ ಹೋರಾಟ, ಹನುಮನ ಪರ ಇಡೀ ಮಂಡ್ಯ ನಿಲ್ಲಲಿದೆ: ಆರ್.ಅಶೋಕ

ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.

ಬೆಂಗಳೂರು: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ನೆಹರು ಕಾಲದಿಂದಲೂ ರಾಮನ ಮೇಲೆ ದ್ವೇಷ ಇದೆ. ಆದರೀಗ ಹನುಮನ ಬಗ್ಗೆ ದ್ವೇಷ ಶುರುವಾಗಿದೆ. ಕೆರೆಗೋಡಿನಲ್ಲಿ 20-30 ವರ್ಷಗಳಿಂದ ಹನುಮ ಧ್ವಜ ಹಾರಿಸಲಾಗುತ್ತಿದೆ. ಯಾವುದೇ ಮಸೀದಿಯ ಬಳಿ ಧ್ವಜ ಹಾರಿಸಿಲ್ಲ. ಪ್ರತಿ ಮನೆಯವರಿಂದ ದೇಣಿಗೆ ಸಂಗ್ರಹಿಸಿ 6 ಲಕ್ಷ ರೂ. ಖರ್ಚು ಮಾಡಿ 108 ಅಡಿ ಸ್ತಂಭ ನಿರ್ಮಿಸಲಾಗಿದೆ. ಇಡೀ ವರ್ಷ ಅಲ್ಲಿ ಹನುಮ ಧ್ವಜ ಹಾರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸಲಾಗುತ್ತದೆ. ಹನುಮನ ನಾಡಿನಲ್ಲಿ ಹನುಮ ಧ್ವಜ ಹಾರಿಸಲು ಸರ್ಕಾರ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಕ್ಕೆ ಮರ್ಯಾದೆ ಇದ್ದರೆ ಅವರ ಅನುದಾನದಿಂದ ಕಂಬ ನಿರ್ಮಿಸಿ ಧ್ವಜ ಹಾರಿಸಬೇಕಿತ್ತು. ಹನುಮನನ್ನು ಹೇಗೆ ವಿರೋಧ ಮಾಡಬೇಕೆಂದು ಚಿಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರವೆಂದರೇನೆ ಶಕುನಿ ಸರ್ಕಾರ. ಹನುಮ ಧ್ವಜವನ್ನು ತೆಗೆಸಲು ಸರ್ಕಾರ ರಾಷ್ಟ್ರಧ್ವಜವನ್ನು ಬಳಕೆ ಮಾಡಿದೆ. ಮೊದಲು ಯಾವ ಧ್ವಜವಿತ್ತೋ ಅದೇ ಧ್ವಜವನ್ನು ಅಲ್ಲಿ ಹಾರಿಸಬೇಕು ಎಂದು ಒತ್ತಾಯಿಸಿದರು.

ಈ ಹೋರಾಟ ಇಡೀ ಮಂಡ್ಯ ಜಿಲ್ಲೆಯ ಮನೆಗಳನ್ನು ತಲುಪಲಿದೆ. ಇದು ಅಕ್ರಮವಾಗಿದ್ದರೆ ನೋಟಿಸ್ ಜಾರಿ ಮಾಡಬೇಕಿತ್ತು. ಅದು ನ್ಯಾಯಾಲಯದಲ್ಲಾದರೂ ತೀರ್ಮಾನ ಆಗಬೇಕಿತ್ತು. ಅದನ್ನು ಬಿಟ್ಟು ಲೋಕಸಭಾ ಚುನಾವಣಾ ಲಾಭಕ್ಕಾಗಿ ಹೀಗೆ ಮಾಡಲಾಗುತ್ತಿದೆ ಎಂದು ಹೇಳುವುದು ಸರಿಯಲ್ಲ. ಇಲ್ಲಿ ಧ್ವಜ ಹಾರಿಸುವುದು ಮಂಡ್ಯ ಜಿಲ್ಲೆಯ ಜನರಿಗೂ ಗೊತ್ತಿರಲಿಲ್ಲ ಎಂದಮೇಲೆ ಇದರಿಂದ ಬಿಜೆಪಿಗೆ ಯಾವ ರಾಜಕೀಯ ಲಾಭ ಬರುತ್ತದೆ ಎಂದು ಪ್ರಶ್ನಿಸಿದರು.

ಕಾಶ್ಮೀರದ ಲಾಲ್ ಚೌಕ್ ನಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಪಾಕಿಸ್ತಾನ ಸವಾಲು ಹಾಕಿತ್ತು. ಅನೇಕ ಬಿಜೆಪಿ ನಾಯಕರು ಹೋಗಿ ರಾಷ್ಟ್ರಧ್ವಜ ಹಾರಿಸಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಲಾಠಿ ಚಾರ್ಜ್ ಮಾಡಿತ್ತು. ಆಗ ರಾಷ್ಟ್ರಧ್ವಜ ಹಾರಿಸಲು ಬಾರದವರು ಈಗ ದೇಶಾಭಿಮಾನ ತೋರುತ್ತಿದ್ದಾರೆ. ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ನಕಲಿ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಸ್ತಂಭ ಅಳವಡಿಸಿ ಹನುಮ ಧ್ವಜ ಹಾರಿಸಿದಾಗಲೇ ಸರ್ಕಾರ ಕ್ರಮ ವಹಿಸಬೇಕಿತ್ತು. ಆದರೆ ಕಾಂಗ್ರೆಸ್ ‌ನಾಯಕರನ್ನು ಕಾರ್ಯಕ್ರಮಕ್ಕೆ ಕರೆದಿಲ್ಲ ಎನ್ನುವ ಕಾರಣಕ್ಕೆ ಧ್ವಜ ಇಳಿಸಲಾಗಿದೆ. ಇದು ಸಂಪೂರ್ಣ ರಾಜಕೀಯದ ಸಂಗತಿ. ಸರ್ಕಾರ ಹೀಗೆಯೇ ಕೆದಕುತ್ತಿದ್ದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ. ಕಾಂಗ್ರೆಸ್ ನ ಹೃದಯವನ್ನು ನಿರ್ಮಾ ಸೋಪು ಹಾಕಿ ತೊಳೆದರೂ ಅಲ್ಲಿ ಶ್ರೀ ರಾಮ ಬರುವುದಿಲ್ಲ. ಅಲ್ಲಿ ಟಿಪ್ಪು ಸುಲ್ತಾನನೇ ಇರುತ್ತಾನೆ ಎಂದರು.

ವೋಟ್ ಮಾಡಿಸಿ: ಹನುಮಂತ ಹಗ್ಗ ಕಡಿಯುವಾಗ ಪೂಜಾರಿ ಶ್ಯಾವಿಗೆ ಕೇಳಿದ ಎಂಬಂತೆ, ಕಷ್ಟದಲ್ಲಿರುವ ಜನರು ಹಣ ಹಾಕಿ ನಿರ್ಮಿಸಿದ ಸ್ತಂಭವನ್ನು ಕಾಂಗ್ರೆಸ್ ನಾಶ ಮಾಡಲು ಮುಂದಾಗಿದ್ದಾರೆ. ನೀವು ಹಿಂದೂಗಳೇ ಆಗಿದ್ದಲ್ಲಿ, ಅಲ್ಲಿ ಹನುಮ ಧ್ವಜ ಇರಬೇಕೋ ಬೇಡವೋ ಎಂದು ಜನರ ಬಳಿ ಮತ ಹಾಕಿಸಲಿ.ಎಲ್ಲರೂ ಹನುಮ ಧ್ವಜ ಬೇಕೆಂದೇ ಆಗ್ರಹಿಸಲಿದ್ದಾರೆ. ದ್ವೇಷದ ರಾಜಕಾರಣ, ವೋಟಿನ ರಾಜಕಾರಣವನ್ನು ಮೊದಲು ಬಿಡಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT