ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಿಂದ ಹಜ್‌ ಯಾತ್ರೆಗೆ 10,500 ಮಂದಿ ಆಯ್ಕೆ

ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ಭಾರತದ ಹಜ್ ಸಮಿತಿಯು ರಾಜ್ಯದಿಂದ 10,500 ಮಂದಿಯನ್ನು ಆಯ್ಕೆ ಮಾಡಿದೆ.

ಬೆಂಗಳೂರು: ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ಭಾರತದ ಹಜ್ ಸಮಿತಿಯು ರಾಜ್ಯದಿಂದ 10,500 ಮಂದಿಯನ್ನು ಆಯ್ಕೆ ಮಾಡಿದೆ.

ಕರ್ನಾಟಕ ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಜ್ ಖಾನ್ ಮಾತನಾಡಿ, ಕಳೆದ ವರ್ಷ 7,500 ಅರ್ಜಿಗಳು ಬಂದಿದ್ದವು. ಈ ವರ್ಷ 3,000 ಅರ್ಜಿಗಳು ಹೆಚ್ಚಾಗಿ ಬಂದಿವೆ. ಸಮಿತಿಯು 80,000 ರೂಪಾಯಿಗಳ ಮುಂಗಡ ಪಾವತಿ ಮಾಡುವಂತೆ ಅರ್ಜಿದಾರರಿಗೆ ಸಂದೇಶಗಳನ್ನು ರವಾನಿಸುತ್ತಿದೆ. ಜಿಲ್ಲಾವಾರು ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

ಈ ವರ್ಷ ರಾಜ್ಯ ಹಜ್ ಸಮಿತಿಯು  ಯಾತ್ರೆಗಾಗಿ 13,500 ಅರ್ಜಿಗಳನ್ನು ಸ್ವೀಕರಿಸಿದ್ದು, ಆದಾಗ್ಯೂ 10,500 ಮಂದಿಯನ್ನು ಮಾತ್ರ ಯಾತ್ರೆಗೆ ಕಳುಹಿಸಲಾಗುತ್ತಿದೆ, ಮೀಸಲಾತಿ ಅಡಿಯಲ್ಲಿ ಈ ಅವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು, ಮಂಗಳೂರು, ಗೋವಾ ಮತ್ತು ಹೈದರಾಬಾದ್‌ಗಳನ್ನು ಕರ್ನಾಟಕ ಮೂಲದ ಯಾತ್ರಾರ್ಥಿಗಳಿಗೆ ಎಂಬಾರ್ಕೇಶನ್ ಪಾಯಿಂಟ್‌ಗಳಾಗಿ ಗುರುತಿಸಲಾಗಿದ್ದು, ಸಮಿತಿಯು ರಾಜ್ಯಕ್ಕೆ ಎಂಬಾರ್ಕೇಶನ್ ಪಾಯಿಂಟ್‌ಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ . ಯಾತ್ರಾರ್ಥಿಗಳಿಗೆ ವಿಮಾನಗಳನ್ನು ನಿರ್ವಹಿಸಲು ವಿಮಾನಯಾನ ಸಂಸ್ಥೆಗಳಿಗೆ ಟೆಂಡರ್‌ಗಳನ್ನು ಕರೆಯಲು ಸಿದ್ಧತೆಗಳನ್ನು ಸಮಿತಿ ನಡೆಸುತ್ತಿದೆ. ಉತ್ತಮ ದರ ನೀಡುವವರನ್ನು ವಿಮಾನಯಾನ ಸಂಸ್ಥೆಗಳನ್ನು ಇಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT