ಸಾಂದರ್ಭಿಕ ಚಿತ್ರ 
ರಾಜ್ಯ

ವಂಟಮುರಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ಓಡಿಹೋಗಿದ್ದ ಜೋಡಿ ಕೊನೆಗೂ ವಿವಾಹ

2023 ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆಗೆ ಕಾರಣವಾಗಿದ್ದ ಪ್ರೇಮಿಗಳು ಕೊನೆಗೂ ಮಂಗಳವಾರ ಅಧಿಕೃತವಾಗಿ ಮದುವೆಯಾಗಿದ್ದಾರೆ.

ಬೆಳಗಾವಿ: 2023 ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆಗೆ ಕಾರಣವಾಗಿದ್ದ ಪ್ರೇಮಿಗಳು ಕೊನೆಗೂ ಮಂಗಳವಾರ ಅಧಿಕೃತವಾಗಿ ಮದುವೆಯಾಗಿದ್ದಾರೆ.

ಓಡಿಹೋಗಿದ್ದ ಜೋಡಿ ಪರಸ್ಪರ ಒಪ್ಪಿಗೆಯೊಂದಿಗೆ ವಿವಾಹವಾಗಿದ್ದು, ಬೆಳಗಾವಿಯ ದಕ್ಷಿಣ ವಲಯ ಉಪನೋಂದಣಿ ಕಚೇರಿಯಲ್ಲಿ ಮದವೆಯನ್ನು ನೋಂದಾಯಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮಾಸಾಂತ್ಯಕ್ಕೆ ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ
 
ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದ ಯುವತಿ ಮತ್ತು ಯುವಕ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯುವತಿಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಹುಡುಗಿಯ ಮನೆಯವರು ಡಿಸೆಂಬರ್ 12, 2023 ರಂದು ಹುಡುಗಿಗೆ ಇನ್ನೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥ ನಿಗದಿಪಡಿಸಿದ್ದರು. ಇದನ್ನು ತಿಳಿದ ನಂತರ, ಹುಡುಗಿ ತಾನು ಪ್ರೀತಿಸುತ್ತಿದ್ದ ಹುಡುಗನ ಜೊತೆ ಹಿಂದಿನ ರಾತ್ರಿ ಓಡಿಹೋಗಿದ್ದರು.

ಈ ವಿಷಯ ತಿಳಿದ ನಂತರ ಕೋಪಗೊಂಡ ಹುಡುಗಿಯ ಪೋಷಕರು ಹುಡುಗನ ಮನೆಗೆ ತೆರಳಿ ಅವರ ಮನೆಯನ್ನು ಧ್ವಂಸಗೊಳಿಸಿದ್ದರು. ಅಲ್ಲದೆ ಯುವತಿಯ ತಾಯಿಯನ್ನು ಥಳಿಸಿ, ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕುವ ಮೂಲಕ ಇಡೀ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT