ಕಾವೇರಿ ನದಿ ದಾಟುತ್ತಿರುವ ಪ್ರವಾಸಿಗರು. 
ರಾಜ್ಯ

ದುಬಾರೆ ಆನೆ ಶಿಬಿರಕ್ಕೆ ಹೋಗಲು ಪ್ರವಾಸಿಗರ ಹರಸಾಹಸ: ಕಾವೇರಿಗೆ ಅಡ್ಡಲಾಗಿ ತೂಗುಸೇತುವೆ ನಿರ್ಮಿಸುವಂತೆ ಆಗ್ರಹ!

ದುಬಾರೆ ಆನೆ ಶಿಬಿರವು ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುವ ಹಾಗೂ 15ಕ್ಕೂ ಹೆಚ್ಚು ಪಳಗಿದ ಆನೆಗಳಿರುವ ನೆಲೆಯಾಗಿದೆ. ಶಿಬಿರವು ಕಾವೇರಿ ನದಿಯ ದಡದಲ್ಲಿದ್ದು, ಪ್ರವಾಸಿಗರು ಈ ಸ್ಥಳಕ್ಕೆ ಬರಬೇಕೆಂದರೆ ನದಿ ದಾಟುವುದು ಅನಿವಾರ್ಯವಾಗಿದೆ.

ಮಡಿಕೇರಿ: ದುಬಾರೆ ಆನೆ ಶಿಬಿರವು ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಪ್ರತೀನಿತ್ಯ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಮಳೆಗಾಲದಲ್ಲಿ ನದಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಈ ಸಂದರ್ಭದಲ್ಲಿ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾವೇರಿಗೆ ಅಡ್ಡಲಾಗಿ ತೂಗುಸೇತವೆ ನಿರ್ಮಿಸಿ, ಪ್ರವಾಸಿಗರಿಗೆ ಅನುವು ಮಾಡಿಕೊಡುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ.

ದುಬಾರೆ ಆನೆ ಶಿಬಿರವು ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುವ ಹಾಗೂ 15ಕ್ಕೂ ಹೆಚ್ಚು ಪಳಗಿದ ಆನೆಗಳಿರುವ ನೆಲೆಯಾಗಿದೆ. ಶಿಬಿರವು ಕಾವೇರಿ ನದಿಯ ದಡದಲ್ಲಿದ್ದು, ಪ್ರವಾಸಿಗರು ಈ ಸ್ಥಳಕ್ಕೆ ಬರಬೇಕೆಂದರೆ ನದಿ ದಾಟುವುದು ಅನಿವಾರ್ಯವಾಗಿದೆ.

ಆನೆ ಶಿಬಿರಕ್ಕೆ ಭೇಟಿ ನೀಡಲು ಕಾಲ್ನಡಿಗೆಯಲ್ಲಿ ನದಿ ದಾಟಲು ಸಾವಿರಾರು ಪ್ರವಾಸಿಗರು ಸಾಲುಗಟ್ಟಿ ನಿಲ್ಲುತ್ತಾರೆ. ಬೇಸಿಗೆಯಲ್ಲಿ ನದಿ ದಾಟುವುದು ಕಾರ್ಯಸಾಧ್ಯವಾದರೂ ಮಳೆಗಾಲದಲ್ಲಿ ನದಿಯ ನೀರಿನ ಮಟ್ಟ ಹೆಚ್ಚಾಗುವುದರಿಂದ ಅದು ಸಾಧ್ಯವಾಗುವುದಿಲ್ಲ.

ಮಳೆಗಾಲದಲ್ಲಿ ಕಾವೇರಿ ನದಿಯ ನೀರಿನ ಮಟ್ಟ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಈ ಸಂದರ್ಭದಲ್ಲಿ ಇಲಾಖೆಯು ದೋಣಿ ಸೌಲಭ್ಯವನ್ನು ಆರಂಭಿಸಿತ್ತು. ಆದರೆ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ದೋಣಿ ಸಿಗದೆ ಹಲವರು ನಿರಾಶೆಗೊಳ್ಳುತ್ತಿದ್ದರು. ಹೀಗಾಗಿ ಮಳೆಗಾಲದಲ್ಲಿ ಶಿಬಿರವನ್ನು ಬಂದ್ ಮಾಡಲಾಗಿತ್ತು.

ತೂಗುಸೇತುವೆಗೆ ಈಗಾಗಲೇ ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಅನುಮತಿ ಸಿಕ್ಕಿಲ್ಲ ಎನ್ನಲಾಗಿದೆ.

ಆದರೆ, ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸುವಂತೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಕುಶಾಲನಗರ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

6 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಜ್ಯಕ್ಕೆ ಸಲ್ಲಿಸಲಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಶಾಸಕರು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ