ಯಕ್ಷಗಾನ ಕಲಾವಿದರು 
ರಾಜ್ಯ

ದಕ್ಷಿಣ ಕನ್ನಡ ಯಕ್ಷಗಾನ ಕಲಾವಿದರಿಗೆ ಅಮೆರಿಕಾ ಪ್ರವಾಸ ಆಯೋಜನೆ!

ಸ್ಯಾನ್ ಜೋಸ್, ಸಿಯಾಟಲ್, ಫೀನಿಕ್ಸ್, ಲಾಸ್ ಏಂಜಲೀಸ್ ಮತ್ತು ಇತರ ಅನೇಕ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ. ಪ್ರತಿಷ್ಠಿತ ಅಕ್ಕ ಸಮ್ಮೇಳನದಲ್ಲಿ ಕಾರ್ಯಕ್ರಮ ಪ್ರದರ್ಶನ ನೀಡುವ ಗೌರವ ದೊರಕಿದೆ ಎಂದು ಪ್ರೊ.ಎಂ.ಎಲ್ ಸಾಮಗ ಹೇಳಿದರು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾವಂತ ಯಕ್ಷಗಾನ ಕಲಾವಿದರ ತಂಡವೊಂದು ಜನಪ್ರಿಯ ಸಾಂಪ್ರದಾಯಿಕ ಕಲೆಯನ್ನು ಅಮೆರಿಕಕ್ಕೆ ಕೊಂಡೊಯ್ಯಲು ಸಜ್ಜಾಗಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ USA ಆಯೋಜಿಸಿರುವ ಈ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಯಕ್ಷಗಾನದ ಶ್ರೀಮಂತ ಪರಂಪರೆಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಅಮೇರಿಕಾ ಘಟಕದ ಅಧ್ಯಕ್ಷ ಅರವಿಂದ ಉಪಾಧ್ಯ, ಅಮೆರಿಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಪ್ರಮುಖ ವ್ಯಕ್ತಿಗಳಾದ ಶ್ರೀಧರ ಆಳ್ವ, ಮಹಾಬಲ ಶೆಟ್ಟಿ ಮತ್ತು ಉಳಿ ಯೋಗೇಂದ್ರ ಭಟ್ ನೇತೃತ್ವದ ತಂಡದಿಂದ ಅಮೆರಿಕದ 20 ರಾಜ್ಯಗಳ ಪ್ರಮುಖ ನಗರಗಳಲ್ಲಿ ಪ್ರದರ್ಶನ ನಿಗದಿಯಾಗಿದೆ. ಹಿನ್ನೆಲೆ ಕಲಾವಿದರಾದ ಪಟ್ಲ ಸತೀಶ್ ಶೆಟ್ಟಿ, ಪದ್ಮನಾಭ ಉಪಾಧ್ಯಾಯ ಮತ್ತು ಚೈತನ್ಯ ಕೃಷ್ಣ ಪದ್ಯಾಣ ಅವರು ಒಂಬತ್ತು ಸದಸ್ಯರ ತಂಡದೊಂದಿಗೆ ಸುಮಾರು 75 ದಿನಗಳ ಪ್ರವಾಸದಲ್ಲಿ ಸೇರಲಿದ್ದಾರೆ ಎಂದು ಅವರು ತಿಳಿಸಿದರು.

ಪುತ್ತಿಗೆ ಮಠ, ಕನ್ನಡ ಬಳಗದ ಸದಸ್ಯರು, ಯಕ್ಷಗಾನ ಸಂಘ, ದೇವಸ್ಥಾನಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರ ಯಕ್ಷಗಾನ ಪ್ರದರ್ಶನದ ಯಶಸ್ಸನ್ನು ಹೆಚ್ಚಿಸುತ್ತದೆ. ಅಲ್ಲದೇ ಆಯ್ದ ಸ್ಥಳಗಳಲ್ಲಿ ಕಿರು ತರಬೇತಿ ಶಿಬಿರದ ಪ್ರದರ್ಶನಗಳನ್ನು ನಡೆಸಲು ತಂಡವು ಯೋಜಿಸಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡವು ಅಮೆರಿಕದಲ್ಲಿ ಅಕ್ಕ ಸಮ್ಮೇಳನದಲ್ಲಿ ಕಾರ್ಯಕ್ರಮ ಪ್ರದರ್ಶನದ ಗೌರವ ಹೊಂದಿದೆ ಎಂದು ಪ್ರೊ.ಎಂ.ಎಲ್ ಸಾಮಗ ಹೇಳಿದರು. ಸ್ಯಾನ್ ಜೋಸ್, ಸಿಯಾಟಲ್, ಫೀನಿಕ್ಸ್, ಲಾಸ್ ಏಂಜಲೀಸ್ ಮತ್ತು ಇತರ ಅನೇಕ ನಗರಗಳಲ್ಲಿ ಪ್ರೇಕ್ಷಕರು ಯಕ್ಷಗಾನದ ಮಾಂತ್ರಿಕತೆಯನ್ನು ಅನುಭವಿಸುತ್ತಾರೆ.

ಈ ಹಿಂದೆ 2023ರ ಜೂನ್ ಮತ್ತು ಜುಲೈನಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣದ ಸಂಯೋಜಕರಾದ ವಾಸುದೇವ ಐತಾಳ್ ಪಣಂಬೂರು ನೇತೃತ್ವದಲ್ಲಿ ವಿದೇಶಿಯರಿಗೆ, ಭಾರತೀಯರಿಗೆ, ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಆಕರ್ಷಕ ಕಾರ್ಯಕ್ರಮಗಳ ಮೂಲಕ ಯಕ್ಷಗಾನ ಪರಿಚಯಿಸುವಲ್ಲಿ ತಂಡ ಯಶಸ್ವಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT