ನದಿಯಲ್ಲಿ ಮುಳುಗಿದ ತೆಪ್ಪಾ 
ರಾಜ್ಯ

ವಿಜಯಪುರ: ಪೊಲೀಸರಿಂದ ತಪ್ಪಿಸಿಕೊಳ್ಳಲು ತೆಪ್ಪದಲ್ಲಿ ಕೃಷ್ಣಾ ನದಿಗೆ ಇಳಿದ 6 ಮಂದಿ ನೀರುಪಾಲು!

ನದಿ ತಟದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಗುಂಪು ಪೊಲೀಸರನ್ನು ಕಂಡ ಕೂಡಲೇ ಭಯದಿಂದ ತೆಪ್ಪದ ಮೂಲಕ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ಇನ್ನು ತೆಪ್ಪದಲ್ಲಿ ಹೋಗುತ್ತಿದ್ದಾಗ ಜೋರಾಗಿ ಗಾಳಿ ಬೀಸಿದ್ದು ಇದರಿಂದ ತೆಪ್ಪ ನದಿಯಲ್ಲಿ ಮುಳುಗಿದ್ದು 6 ಮಂದಿ ಸಾವನ್ನಪ್ಪಿದ್ದಾರೆ.

ವಿಜಯಪುರ: ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲಾಗಿರುವ ಘಟನೆ ನಡೆದಿದೆ.

ನದಿ ತಟದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಗುಂಪು ಪೊಲೀಸರನ್ನು ಕಂಡ ಕೂಡಲೇ ಭಯದಿಂದ ತೆಪ್ಪದ ಮೂಲಕ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ಇನ್ನು ತೆಪ್ಪದಲ್ಲಿ ಹೋಗುತ್ತಿದ್ದಾಗ ಜೋರಾಗಿ ಗಾಳಿ ಬೀಸಿದ್ದು ಇದರಿಂದ ತೆಪ್ಪ ನದಿಯಲ್ಲಿ ಮುಳುಗಿದ್ದು ಆರು ಮಂದಿ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಬ್ಬರು ಈಜಿ ದಡ ಸೇರಿ ಜೀವ ಉಳಿಸಿಕೊಂಡಿದ್ದಾರೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಸದ್ಯ ಇಬ್ಬರ ಶವ ಹೊರ ತೆಗೆಯಲಾಗಿದ್ದು ಇನ್ನುಳಿದವರ ಮೃದೇಹಗಳಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಸ್ಪಿ ಋಷಿಕೇಶ ಸೋನೆವಣೆ, ಎಎಸ್ಪಿ ಶಂಕರ ಮಾರಿಹಾರ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಓರ್ವ ಮೃತನ ಗುರುತು ಪತ್ತೆಯಾಗಿದ್ದು 34 ವರ್ಷದ ಪುಂಡಲಿಕ ಎಂಕಂಚಿ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT