ವಿಜಯಲಕ್ಷ್ಮೀ-ಪವಿತ್ರಾಗೌಡ-ದರ್ಶನ್ 
ರಾಜ್ಯ

'ನನ್ನ ಮುಂದಿನ ಜೀವನಕ್ಕೆ ತೊಂದರೆ ಆಗದಿರಲಿ'; ದರ್ಶನ್‌ಗೆ ನಾನೊಬ್ಬಳೆ​ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್​ ಆಯುಕ್ತಗೆ ವಿಜಯಲಕ್ಷ್ಮಿ ಪತ್ರ!

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್​ ಪತ್ನಿ ಎಂದು ಹೇಳಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್​, ನಟಿ ಪವಿತ್ರಾ ಗೌಡ ಸೇರಿದಂತೆ 15ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು ಸದ್ಯ ಆರೋಪಿಗಳು ಪರಪ್ಪರನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್​ ಪತ್ನಿ ಎಂದು ಹೇಳಿದ್ದರು.

ಈ ಹೇಳಿಕೆ ಕುರಿತಂತೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಕಮಿಷನರ್​ ದಯಾನಂದ್ ಅವರಿಗೆ ಪತ್ರ ಬರೆದಿದ್ದು ಸುದ್ದಿಗೋಷ್ಠಿಯಲ್ಲಿ ನೀವು ದರ್ಶನ್ ರ ಎರಡನೇ​ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಹೀಗಾಗಿ ರಾಷ್ಟ್ರಮಟ್ಟದ ಮಾಧ್ಯಮಗಳು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ದಂಪತಿ ಬಂಧನ​ ಅಂತ ಸುದ್ದಿ ಮಾಡಿವೆ. ಇದು ನನ್ನ ಮತ್ತು ನನ್ನ ಮಗ ವಿನೀಶ್​ ಗೆ ಮುಂದಿನ ದಿನಗಳಲ್ಲಿ ತೊಂದರೆ ಆಗಬಾರದು. ಪೊಲೀಸ್​ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಇದರಿಂದ ನನಗೆ ಭವಿಷ್ಯದಲ್ಲಿ ತೊಂದರೆ ಆಗದಿರಲಿ ಎಂದು ಪತ್ರದಲ್ಲಿ ವಿಜಯಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ.

ಪವಿತ್ರಾಗೌಡ ದರ್ಶನ್ ಪತ್ನಿಯಲ್ಲ ಆಕೆ ನನ್ನ ಗಂಡನ ಸ್ನೇಹಿತೆ ಅಷ್ಟೆ. ದರ್ಶನ್​ ಅವರನ್ನು ನಾನು ಮಾತ್ರ ಕಾನೂನಾತ್ಮಕವಾಗಿ ಮದುವೆ ಆಗಿದ್ದೇನೆ. ನಮ್ಮ ಮದುವೆ 2003ರ ಮೇ 19ರಂದು ಧರ್ಮಸ್ಥಳದಲ್ಲಿ ನಡೆದಿತ್ತು ಎಂದು ವಿಜಯಲಕ್ಷ್ಮಿ ಅವರು ಈ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT