ವಿಜಯಲಕ್ಷ್ಮೀ-ಪವಿತ್ರಾಗೌಡ-ದರ್ಶನ್ 
ರಾಜ್ಯ

'ನನ್ನ ಮುಂದಿನ ಜೀವನಕ್ಕೆ ತೊಂದರೆ ಆಗದಿರಲಿ'; ದರ್ಶನ್‌ಗೆ ನಾನೊಬ್ಬಳೆ​ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್​ ಆಯುಕ್ತಗೆ ವಿಜಯಲಕ್ಷ್ಮಿ ಪತ್ರ!

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್​ ಪತ್ನಿ ಎಂದು ಹೇಳಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್​, ನಟಿ ಪವಿತ್ರಾ ಗೌಡ ಸೇರಿದಂತೆ 15ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು ಸದ್ಯ ಆರೋಪಿಗಳು ಪರಪ್ಪರನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್​ ಪತ್ನಿ ಎಂದು ಹೇಳಿದ್ದರು.

ಈ ಹೇಳಿಕೆ ಕುರಿತಂತೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಕಮಿಷನರ್​ ದಯಾನಂದ್ ಅವರಿಗೆ ಪತ್ರ ಬರೆದಿದ್ದು ಸುದ್ದಿಗೋಷ್ಠಿಯಲ್ಲಿ ನೀವು ದರ್ಶನ್ ರ ಎರಡನೇ​ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಹೀಗಾಗಿ ರಾಷ್ಟ್ರಮಟ್ಟದ ಮಾಧ್ಯಮಗಳು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ದಂಪತಿ ಬಂಧನ​ ಅಂತ ಸುದ್ದಿ ಮಾಡಿವೆ. ಇದು ನನ್ನ ಮತ್ತು ನನ್ನ ಮಗ ವಿನೀಶ್​ ಗೆ ಮುಂದಿನ ದಿನಗಳಲ್ಲಿ ತೊಂದರೆ ಆಗಬಾರದು. ಪೊಲೀಸ್​ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಇದರಿಂದ ನನಗೆ ಭವಿಷ್ಯದಲ್ಲಿ ತೊಂದರೆ ಆಗದಿರಲಿ ಎಂದು ಪತ್ರದಲ್ಲಿ ವಿಜಯಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ.

ಪವಿತ್ರಾಗೌಡ ದರ್ಶನ್ ಪತ್ನಿಯಲ್ಲ ಆಕೆ ನನ್ನ ಗಂಡನ ಸ್ನೇಹಿತೆ ಅಷ್ಟೆ. ದರ್ಶನ್​ ಅವರನ್ನು ನಾನು ಮಾತ್ರ ಕಾನೂನಾತ್ಮಕವಾಗಿ ಮದುವೆ ಆಗಿದ್ದೇನೆ. ನಮ್ಮ ಮದುವೆ 2003ರ ಮೇ 19ರಂದು ಧರ್ಮಸ್ಥಳದಲ್ಲಿ ನಡೆದಿತ್ತು ಎಂದು ವಿಜಯಲಕ್ಷ್ಮಿ ಅವರು ಈ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ