ಸಂಗ್ರಹ ಚಿತ್ರ 
ರಾಜ್ಯ

ನಗರದಲ್ಲಿ 150 ಕಿಮೀ ಉದ್ದದ ವೈಟ್‌ ಟಾಪಿಂಗ್‌ ಕಾಮಗಾರಿ ಶೀಘ್ರ ಆರಂಭ!

ವೈಟ್‌ ಟಾಪಿಂಗ್‌ ಕಾಮಗಾರಿ ನಡೆಯುವ ರಸ್ತೆಗಳಲ್ಲಿ ಯಾವುದಾದರೂ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡಬೇಕಿದ್ದಲ್ಲಿ, ತಕ್ಷಣವೇ ಸಮೀಕ್ಷೆ ನಡೆಸಿ, ಕೋರಿಕೆ ಸಲ್ಲಿಸಬೇಕು.

ಬೆಂಗಳೂರು: ನಗರದಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿ ಕೈಗೆತ್ತಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚನೆ ನೀಡಿದ್ದಾರೆ.

ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದ ಅಂತರ್ ಇಲಾಖಾ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 15 ಪ್ಯಾಕೇಜ್ ಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಈಗಾಗಲೇ 13 ಪ್ಯಾಕೇಜ್ ಗಳನ್ನು ಅಂತಿಮಗೊಳಿಸಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಹೇಳಿದರು.

ಇನ್ನೆರಡು ಪ್ಯಾಕೇಜ್‌ಗಳಿಗೆ ರಾಜ್ಯ ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದ್ದು, ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

ವೈಟ್‌ ಟಾಪಿಂಗ್‌ ಕಾಮಗಾರಿ ನಡೆಯುವ ರಸ್ತೆಗಳಲ್ಲಿ ಯಾವುದಾದರೂ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡಬೇಕಿದ್ದಲ್ಲಿ, ತಕ್ಷಣವೇ ಸಮೀಕ್ಷೆ ನಡೆಸಿ, ಕೋರಿಕೆ ಸಲ್ಲಿಸಬೇಕು. ವೈಟ್‌ ಟಾಪಿಂಗ್ ಕಾಮಗಾರಿ ನಡೆಸುವ ವೇಳೆಯೇ ಬದಲಾವಣೆಗಳಿದ್ದಲ್ಲಿ ಮಾಡಿಕೊಳ್ಳಬೇಕು. ಜಲಮಂಡಳಿಯಿಂದ ರಸ್ತೆಯ ಎರಡೂ ಬದಿ ಕೊಳವೆಗಳನ್ನು ಅಳವಡಿಸಿಕೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ಯಾವುದೇ ಕಾರಣಕ್ಕೂ ರಸ್ತೆ ಅಗೆಯಲು ಅಥವಾ ಕತ್ತರಿಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದರು.

ವೈಟ್‌ ಟಾಪಿಂಗ್ ಕಾಮಗಾರಿ ನಡೆಯುವ ರಸ್ತೆಗಳ ಎರಡೂ ಬದಿ ಪಾದಚಾರಿ ಮಾರ್ಗದಲ್ಲಿ ‘ಯುಟಿಲಿಟಿಗಾಗಿ ಡಕ್ಟ್ಸ್’ ಅಳವಡಿಕೆಗೆ ಸಮಗ್ರ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಂಧ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ವೈಟ್‌ ಟಾಪಿಂಗ್ ಕಾಮಗಾರಿ ನಡೆಯುವ ರಸ್ತೆಗಳ ಪ್ರದೇಶದಲ್ಲಿ ಸಂಚಾರ ಪೊಲೀಸ್ ವಿಭಾಗದ ಜೊತೆ ಸಮನ್ವಯ ಸಾಧಿಸಿ ಮಾರ್ಗ ಬದಲಾವಣೆ ಮಾಡಿಕೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕಾಮಗಾರಿಯ ವೇಳೆ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಹಂತ ಹಂತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT