ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ!

ಕೆಎಸ್ಆರ್ ಹೊರಾವರಣದ ಕಾರುಗಳ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹ ನೋಡಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣ ಆವರಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹವೊಂದು ಬುಧವಾರ ಪತ್ತೆಯಾಗಿದೆ.

ಮೃತ ಬಾಲಕಿ 5ರಿಂದ 6 ವರ್ಷ ವಯಸ್ಸಿನವಳಾಗಿದ್ದು, ಮೃತದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಕೆಎಸ್ಆರ್ ಹೊರಾವರಣದ ಕಾರುಗಳ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹ ನೋಡಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೇ ನಿಲ್ದಾಣದ ವಾಹನಗಳ ನಿಲುಗಡೆ ಪ್ರದೇಶಕ್ಕೆ ಬೇರೆಡೆಯಿಂದ ಬಾಲಕಿ ಮೃತದೇಹ ತಂದು ಬಿಸಾಡಿ ಹೋಗಿರುವ ಶಂಕೆ ಇದೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಖಚಿತವಾಗಿಲ್ಲ. ಮರಣೋತ್ತರ ವರದಿ ಬಳಿಕ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹದಿಂದ ಸಂಪೂರ್ಣವಾಗಿ ಮುಚ್ಚಲಾಗಿತ್ತು. ಬೆಳಿಗ್ಗೆ ಸಾಕಷ್ಟು ಸಮಯವಾದರೂ ಮೇಲೇಳದಿದ್ದಾಗ ಸುತ್ತಮುತ್ತಲಿನವರು ಎಬ್ಬಿಸಲು ಯತ್ನಿಸಿದ್ದಾರೆ. ಯಾವುದೇ ಚಲನೆಗಳು ಕಂಡು ಬರದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ಹೇಳಿದ್ದಾರೆ.

ಪ್ರಕರಣ ಸಂಬಂಧ 5 ವಿಶೇಷಗಳನ್ನು ರಚಿಸಲಾಗಿದೆ. ಸ್ಥಳದ ಸುತ್ತಲೂ ಹಲವು ಸಿಸಿಟಿವಿ ಕ್ಯಾಮೆರಾಗಳಿದ್ದು, ಶೀಘ್ರದಲ್ಲಿಯೇ ಎಲ್ಲಾ ಮಾಹಿತಿ ತಿಳಿದುಬರಲಿದೆ. ರೈಲ್ವೇ ನಿಲ್ದಾಣ ಜನನಿಬಿಡ ಪ್ರದೇಶವಾಗಿದ್ದು, ಇಲ್ಲಿ ಹತ್ಯೆ ನಡೆದಿರುವ ಸಾಧ್ಯತೆಗಳಿಲ್ಲ. ಬೇರೆಡೆ ಹತ್ಯೆ ಮಾಡಿ, ಇಲ್ಲಿ ತಂದಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಸಿಟಿ ರೈಲ್ವೇ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ನಡುವೆ ಕೆಲ ಪ್ರತ್ಯಕ್ಷದರ್ಶಿಗಳು 15 ದಿನಗಳ ಹಿಂದೆ ಬಾಲಕಿಯನ್ನು ಆಕೆಯ ತಾಯಿಯೊಂದಿಗೆ ಇದ್ದಿದ್ದನ್ನು ನೋಡಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT