ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ!

ಕೆಎಸ್ಆರ್ ಹೊರಾವರಣದ ಕಾರುಗಳ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹ ನೋಡಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣ ಆವರಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹವೊಂದು ಬುಧವಾರ ಪತ್ತೆಯಾಗಿದೆ.

ಮೃತ ಬಾಲಕಿ 5ರಿಂದ 6 ವರ್ಷ ವಯಸ್ಸಿನವಳಾಗಿದ್ದು, ಮೃತದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಕೆಎಸ್ಆರ್ ಹೊರಾವರಣದ ಕಾರುಗಳ ನಿಲುಗಡೆ ಪ್ರದೇಶದಲ್ಲಿ ಅಪರಿಚಿತ ಬಾಲಕಿ ಮೃತದೇಹ ನೋಡಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೇ ನಿಲ್ದಾಣದ ವಾಹನಗಳ ನಿಲುಗಡೆ ಪ್ರದೇಶಕ್ಕೆ ಬೇರೆಡೆಯಿಂದ ಬಾಲಕಿ ಮೃತದೇಹ ತಂದು ಬಿಸಾಡಿ ಹೋಗಿರುವ ಶಂಕೆ ಇದೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಖಚಿತವಾಗಿಲ್ಲ. ಮರಣೋತ್ತರ ವರದಿ ಬಳಿಕ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹದಿಂದ ಸಂಪೂರ್ಣವಾಗಿ ಮುಚ್ಚಲಾಗಿತ್ತು. ಬೆಳಿಗ್ಗೆ ಸಾಕಷ್ಟು ಸಮಯವಾದರೂ ಮೇಲೇಳದಿದ್ದಾಗ ಸುತ್ತಮುತ್ತಲಿನವರು ಎಬ್ಬಿಸಲು ಯತ್ನಿಸಿದ್ದಾರೆ. ಯಾವುದೇ ಚಲನೆಗಳು ಕಂಡು ಬರದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ಹೇಳಿದ್ದಾರೆ.

ಪ್ರಕರಣ ಸಂಬಂಧ 5 ವಿಶೇಷಗಳನ್ನು ರಚಿಸಲಾಗಿದೆ. ಸ್ಥಳದ ಸುತ್ತಲೂ ಹಲವು ಸಿಸಿಟಿವಿ ಕ್ಯಾಮೆರಾಗಳಿದ್ದು, ಶೀಘ್ರದಲ್ಲಿಯೇ ಎಲ್ಲಾ ಮಾಹಿತಿ ತಿಳಿದುಬರಲಿದೆ. ರೈಲ್ವೇ ನಿಲ್ದಾಣ ಜನನಿಬಿಡ ಪ್ರದೇಶವಾಗಿದ್ದು, ಇಲ್ಲಿ ಹತ್ಯೆ ನಡೆದಿರುವ ಸಾಧ್ಯತೆಗಳಿಲ್ಲ. ಬೇರೆಡೆ ಹತ್ಯೆ ಮಾಡಿ, ಇಲ್ಲಿ ತಂದಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಸಿಟಿ ರೈಲ್ವೇ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ನಡುವೆ ಕೆಲ ಪ್ರತ್ಯಕ್ಷದರ್ಶಿಗಳು 15 ದಿನಗಳ ಹಿಂದೆ ಬಾಲಕಿಯನ್ನು ಆಕೆಯ ತಾಯಿಯೊಂದಿಗೆ ಇದ್ದಿದ್ದನ್ನು ನೋಡಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel