ತುಂಗಭದ್ರಾ ಜಲಾಶಯ 
ರಾಜ್ಯ

ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ: ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ

ಎರಡು ತಿಂಗಳ ಹಿಂದೆ ಜಲಾಶಯದಲ್ಲಿ 3 ಟಿಎಂಸಿ ಅಡಿ ಇದ್ದ ನೀರಿನ ಮಟ್ಟ, ಇದೀಗ 8 ಟಿಎಂಸಿ ಅಡಿಗೆ ಏರಿಕೆಯಾಗಿದೆ.

ಹೊಸಪೇಟೆ: ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದೆ.

ಎರಡು ತಿಂಗಳ ಹಿಂದೆ ಜಲಾಶಯದಲ್ಲಿ 3 ಟಿಎಂಸಿ ಅಡಿ ಇದ್ದ ನೀರಿನ ಮಟ್ಟ, ಇದೀಗ 8 ಟಿಎಂಸಿ ಅಡಿಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ 10,503 ಕ್ಯೂಸೆಕ್ ಒಳಹರಿವು ಇದೆ ಎಂದು ವರದಿಗಳು ತಿಳಿಸಿವೆ.

ಕಳೆದ ವರ್ಷ ಇದೇ ವೇಳೆಗೆ ಬರಗಾಲದ ಕಾರಣ ಜಲಾಶಯದಲ್ಲಿ ಕೇವಲ 3 ಟಿಎಂಸಿ ಅಡಿ ಸಂಗ್ರಹವಿತ್ತು. ಈ ವರ್ಷ, ಜಲಾಶಯದ ಮಟ್ಟವು 100.855 ಟಿಎಂಸಿ ಅಡಿ ಸಾಮರ್ಥ್ಯದ ಬದಲಿಗೆ 80 ಟಿಎಂಸಿಎಫ್‌ಟಿಗೆ ಏರಬಹುದು ಎಂದು ಅಧಿಕಾರಿಗಳು ಆಶಿಸಿದ್ದಾರೆ.

ತುಂಗಾ ಮತ್ತು ಭದ್ರಾ ನದಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಟ್ಟಿದ್ದು, ಎರಡು ವಾರಗಳ ಹಿಂದೆ ನದಿಗಳ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.

ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಲೆಗಳಿಗೆ 200 ಕ್ಯೂಸೆಕ್ ನೀರು ಬಿಡಲಾಗುತ್ತಿದೆ ಎಂದು ಹೊಸಪೇಟೆಯ ರೈತ ಮುಖಂಡ ಶಾಂತಾರಾಮ್ ಕೆ ಹೇಳಿದ್ದಾರೆ.

ಇದೇ ವೇಳೆ ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಭತ್ತ, ಮೆಣಸಿನಕಾಯಿ ಬೆಳೆಗಳಿಗೆ ನೀರಿನ ಅಗತ್ಯವಿದ್ದು, ನೀರು ಬಿಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT