ತುಂಗಭದ್ರಾ ಜಲಾಶಯ 
ರಾಜ್ಯ

ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ: ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ

ಎರಡು ತಿಂಗಳ ಹಿಂದೆ ಜಲಾಶಯದಲ್ಲಿ 3 ಟಿಎಂಸಿ ಅಡಿ ಇದ್ದ ನೀರಿನ ಮಟ್ಟ, ಇದೀಗ 8 ಟಿಎಂಸಿ ಅಡಿಗೆ ಏರಿಕೆಯಾಗಿದೆ.

ಹೊಸಪೇಟೆ: ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದೆ.

ಎರಡು ತಿಂಗಳ ಹಿಂದೆ ಜಲಾಶಯದಲ್ಲಿ 3 ಟಿಎಂಸಿ ಅಡಿ ಇದ್ದ ನೀರಿನ ಮಟ್ಟ, ಇದೀಗ 8 ಟಿಎಂಸಿ ಅಡಿಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ 10,503 ಕ್ಯೂಸೆಕ್ ಒಳಹರಿವು ಇದೆ ಎಂದು ವರದಿಗಳು ತಿಳಿಸಿವೆ.

ಕಳೆದ ವರ್ಷ ಇದೇ ವೇಳೆಗೆ ಬರಗಾಲದ ಕಾರಣ ಜಲಾಶಯದಲ್ಲಿ ಕೇವಲ 3 ಟಿಎಂಸಿ ಅಡಿ ಸಂಗ್ರಹವಿತ್ತು. ಈ ವರ್ಷ, ಜಲಾಶಯದ ಮಟ್ಟವು 100.855 ಟಿಎಂಸಿ ಅಡಿ ಸಾಮರ್ಥ್ಯದ ಬದಲಿಗೆ 80 ಟಿಎಂಸಿಎಫ್‌ಟಿಗೆ ಏರಬಹುದು ಎಂದು ಅಧಿಕಾರಿಗಳು ಆಶಿಸಿದ್ದಾರೆ.

ತುಂಗಾ ಮತ್ತು ಭದ್ರಾ ನದಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಟ್ಟಿದ್ದು, ಎರಡು ವಾರಗಳ ಹಿಂದೆ ನದಿಗಳ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.

ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಲೆಗಳಿಗೆ 200 ಕ್ಯೂಸೆಕ್ ನೀರು ಬಿಡಲಾಗುತ್ತಿದೆ ಎಂದು ಹೊಸಪೇಟೆಯ ರೈತ ಮುಖಂಡ ಶಾಂತಾರಾಮ್ ಕೆ ಹೇಳಿದ್ದಾರೆ.

ಇದೇ ವೇಳೆ ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಭತ್ತ, ಮೆಣಸಿನಕಾಯಿ ಬೆಳೆಗಳಿಗೆ ನೀರಿನ ಅಗತ್ಯವಿದ್ದು, ನೀರು ಬಿಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ