ಸಾಂದರ್ಭಿಕ ಚಿತ್ರ  
ರಾಜ್ಯ

ಕೊಡಗು: ಭೂದಾಖಲೆ-ಸರ್ವೆ ಇಲಾಖೆಯಲ್ಲಿ ಶೇ 50ಕ್ಕೂ ಹೆಚ್ಚು ಸಿಬ್ಬಂದಿ ಕೊರತೆ, ಸಾರ್ವಜನಿಕರಿಗೆ ಸಮಸ್ಯೆ

ಜಿಲ್ಲಾ ಭೂದಾಖಲೆಗಳು ಮತ್ತು ಸರ್ವೆ ಇಲಾಖೆಗೆ ಕ್ಲರ್ಕ್ ಹುದ್ದೆಗಳು ಸೇರಿದಂತೆ ಒಟ್ಟು 101 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಆದರೆ, ಇಲಾಖೆಯಲ್ಲಿ ಒಟ್ಟು 59 ಹುದ್ದೆಗಳು ಖಾಲಿ ಬಿದ್ದಿದ್ದು, ಇಲಾಖೆ ಕಾರ್ಯವೈಖರಿಗೆ ತೀವ್ರ ಸಮಸ್ಯೆಯಾಗಿದೆ.

ಮಡಿಕೇರಿ: ‘ಬಾಣೆ’ ಜಮೀನುಗಳನ್ನು ಕಂದಾಯ ಇಲಾಖೆಗೆ ಒಳಪಡಿಸಬೇಕೆಂಬುದು ಕೊಡಗಿನ ರೈತರ ಬಹುಮುಖ್ಯ ಬೇಡಿಕೆಯಾಗಿದೆ. ‘ಬಾಣೆ’ ಜಮೀನಿನ ಸರ್ವೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದ್ದರೂ ಜಿಲ್ಲೆಯಲ್ಲಿ ಭೂ ದಾಖಲೆ ಮತ್ತು ಸರ್ವೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ನೂರಾರು ರೈತರು ಹಾಗೂ ಇತರೆ ನಿವಾಸಿಗಳಿಗೆ ಸಮಯಕ್ಕೆ ಸರಿಯಾಗಿ ಕೆಲಸವಾಗದೆ ತೊಂದರೆಯಾಗಿದೆ.

ಜಿಲ್ಲಾ ಭೂದಾಖಲೆಗಳು ಮತ್ತು ಸರ್ವೆ ಇಲಾಖೆಗೆ ಕ್ಲರ್ಕ್ ಹುದ್ದೆಗಳು ಸೇರಿದಂತೆ ಒಟ್ಟು 101 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಆದರೆ, ಇಲಾಖೆಯಲ್ಲಿ ಒಟ್ಟು 59 ಹುದ್ದೆಗಳು ಖಾಲಿ ಬಿದ್ದಿದ್ದು, ಇಲಾಖೆ ಕಾರ್ಯವೈಖರಿಗೆ ತೀವ್ರ ಸಮಸ್ಯೆಯಾಗಿದೆ. ಇದಲ್ಲದೇ ಜಿಲ್ಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕುಶಾಲನಗರ, ಪೊನ್ನಂಪೇಟೆ ತಾಲೂಕು ಸೇರಿದಂತೆ ಐದು ತಾಲೂಕುಗಳಿದ್ದರೂ ಹೊಸ ತಾಲೂಕುಗಳಿಗೆ ಇಲಾಖೆಗೆ ಯಾವುದೇ ಹುದ್ದೆ ಮಂಜೂರಾಗಿಲ್ಲ. ಶೇಕಡಾ 50ಕ್ಕೂ ಅಧಿಕ ಸಿಬ್ಬಂದಿ ಕೊರತೆಯ ನಡುವೆ ಈಗಿರುವ ಅಧಿಕಾರಿಗಳನ್ನು ಹೊಸ ತಾಲೂಕುಗಳಿಗೆ ಪ್ರಭಾರಿ ಸರ್ವೇ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಮೂಲಗಳ ಪ್ರಕಾರ ವಿರಾಜಪೇಟೆ ತಾಲೂಕಿನಲ್ಲಿ ಭೂಮಾಪನ ಮತ್ತು ಅಳತೆಗೆ ಸಂಬಂಧಿಸಿದ 700ಕ್ಕೂ ಅಧಿಕ ಕಡತಗಳು ಸರ್ವೆ ಅಧಿಕಾರಿಗಳ ಅಲಭ್ಯತೆಯಿಂದಾಗಿ ಹಲವು ತಿಂಗಳುಗಳಿಂದ ಬಾಕಿ ಉಳಿದಿವೆ. ಪೊನ್ನಂಪೇಟೆ ತಾಲೂಕಿನಲ್ಲಿ ಪ್ರತಿದಿನ ಹೊಸ ಅರ್ಜಿಗಳು ಹರಿದು ಬರುತ್ತಿದ್ದರೂ ಒಟ್ಟು 831 ಭೂಮಾಪನ ಕಡತಗಳು ಬಾಕಿ ಉಳಿದಿವೆ.

ರಾಜ್ಯ ಸರ್ಕಾರ ಹೊಸ ತಾಲೂಕುಗಳಿಗೆ ಯಾವುದೇ ಹುದ್ದೆ ಕಲ್ಪಿಸಿಲ್ಲ. ಸಿಬ್ಬಂದಿ ಕೊರತೆಯ ನಡುವೆ ಅಧಿಕಾರಿಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ.

ಜಿಲ್ಲೆಗೆ ಮಡಿಕೇರಿ ಕೇಂದ್ರ ಕಚೇರಿ ಹಾಗೂ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಮೂರು ತಾಲೂಕುಗಳಿಗೆ ಒಟ್ಟು 50 ಸರ್ವೇಯರ್‌ಗಳ ಹುದ್ದೆ ಮಂಜೂರಾಗಿದೆ. ಆದರೆ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕಿನ ಸರ್ವೇಯರ್‌ಗಳು ಕ್ರಮವಾಗಿ ಪೊನ್ನಂಪೇಟೆ ಮತ್ತು ಕುಶಾಲನಗರ ತಾಲೂಕಿಗೆ ಪ್ರಭಾರಿ ಸರ್ವೆಯರ್‌ಗಳಾಗಿ ಭೇಟಿ ನೀಡಬೇಕಾಗಿದ್ದರೂ ಮೂರು ತಾಲೂಕುಗಳಲ್ಲಿ 11 ಭೂಮಾಪಕರ ಹುದ್ದೆಗಳು ಖಾಲಿ ಇವೆ. ವಿರಾಜಪೇಟೆ ತಾಲೂಕಿನ ಸಂಬಂಧಪಟ್ಟ ಎಡಿಎಲ್‌ಆರ್‌ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಡಿಡಿಎಲ್‌ಆರ್‌ಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಡಿಡಿಎಲ್ ಆರ್ ನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಅಧಿಕಾರಿಯು ದೀರ್ಘಾವಧಿಯ ರಜೆಯಲ್ಲಿದ್ದಾರೆ ಎಂದರು. ಫೋನ್ ನಲ್ಲಿ ಪ್ರತಿಕ್ರಿಯೆಗೆ ಲಭ್ಯರಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT