ಸಾಂದರ್ಭಿಕ ಚಿತ್ರ 
ರಾಜ್ಯ

Yamaraja has arrived at your location: ಡ್ರೈವರ್ ಹೆಸರು ನೋಡಿ ರೈಡ್ ಕ್ಯಾನ್ಸಲ್ ಮಾಡಿದ OLA ಪ್ರಯಾಣಿಕ!

ಯಮರಾಜ ಆಗಮಿಸಿದ್ದಾನೆ. ನಿಮ್ಮ ಲೋಕೇಶನ್‌ನಲ್ಲಿ ಕಾಯುತ್ತಿದ್ದಾರೆ(ಯಮರಾಜ ಹ್ಯಾಸ್ ಅರೈವ್ಡ್, ಈಸ್ ವೈಟಿಂಗ್ ಅಟ್ ಯುವರ್ ಲೋಕೇಶನ್) ಎಂದು ಓಲಾದಿಂದ ಸಂದೇಶ ಬಂದಿದೆ.

ಬೆಂಗಳೂರು: ಕಡಿಮೆ ದರಗಳಲ್ಲಿ, ಕುಳಿತಲ್ಲಿಂದಲೇ ಕಾರು ಬುಕಿಂಗ್ ಮಾಡಿ ಸುಲಭವಾಗಿ ಪ್ರಯಾಣ ಮಾಡಬಹುದು. ಗ್ರಾಹಕರ ಸುರಕ್ಷತೆಗೆ ಆ್ಯಪ್ ಟ್ಯಾಕ್ಸಿ ಸೇವೆಗಳು ಹಲವು ಫೀಚರ್ಸ್ ನೀಡಿದೆ. ಈ ಪೈಕಿ ರೈಡ್ ಕ್ಯಾನ್ಸಲ್ ಮಾಡುವ ಅವಕಾಶವನ್ನೂ ನೀಡಿದೆ. ಇಲ್ಲೊಬ್ಬ ಓಲಾ ಟ್ಯಾಕ್ಸಿ ಬುಕ್ ಮಾಡಿದ್ದಾನೆ. ಬಳಿಕ ಚಾಲಕನ ಹೆಸರು ನೋಡಿದ ಪ್ರಯಾಣಿಕ ರೈಡ್ ಕ್ಯಾನ್ಸಲ್ ಮಾಡಿದ್ದಾನೆ.

ಓಲಾ ಮತ್ತು ಉಬರ್‌ನಂತಹ ಕ್ಯಾಬ್ ಕಂಪನಿಗಳು ತಮ್ಮ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ರೈವರ್ ಹೆಸರುಗಳು ಮತ್ತು ಸ್ಥಳಗಳ ಬಗ್ಗೆ ಮೊದಲೇ ಮಾಹಿತಿ ನೀಡುತ್ತವೆ. ಹಾಗೇ ಇದರಲ್ಲಿ ಗ್ರಾಹಕರು ತಮ್ಮ ಬುಕಿಂಗ್ ಅನ್ನು ರದ್ದುಗೊಳಿಸುವ ಆಯ್ಕೆಯನ್ನು ಸಹ ಹೊಂದಿದ್ದಾರೆ. ಆದರೆ ಈ ಸುರಕ್ಷತೆಯ ಸೌಲಭ್ಯಗಳು ಈಗ ಕ್ಯಾಬ್ ಕಂಪನಿಗಳಿಗೆ ಸಮಸ್ಯೆಯನ್ನುಂಟುಮಾಡಿದೆ. ಯಾಕೆಂದರೆ ಕ್ಯಾಬ್ ಡ್ರೈವರ್ ಹೆಸರು ತಿಳಿದು ವ್ಯಕ್ತಿಯೊಬ್ಬ ಬುಕ್ಕಿಂಗ್ ಅನ್ನು ರದ್ದು ಮಾಡಿದ್ದಾರೆ. ಈ ವಿಷಯ ಎಲ್ಲೆಡೆ ವೈರಲ್ ಆಗಿದೆ.

ಯಮರಾಜ ಆಗಮಿಸಿದ್ದಾನೆ. ನಿಮ್ಮ ಲೋಕೇಶನ್‌ನಲ್ಲಿ ಕಾಯುತ್ತಿದ್ದಾರೆ(ಯಮರಾಜ ಹ್ಯಾಸ್ ಅರೈವ್ಡ್, ಈಸ್ ವೈಟಿಂಗ್ ಅಟ್ ಯುವರ್ ಲೋಕೇಶನ್) ಎಂದು ಓಲಾದಿಂದ ಸಂದೇಶ ಬಂದಿದೆ. ಈ ಸಂದೇಶ ನೋಡಿದ ಪ್ರಯಾಣಿಕ ರೈಡ್ ಕ್ಯಾನ್ಸಲ್ ಮಾಡಿದ್ದಾನೆ. ಬಳಿಕ ನಾನು ಮಲಗುತ್ತಿದ್ದೇನೆ ಎಂದು ಕಾರಣವನ್ನೂ ನೀಡಿದ್ದಾನೆ.

ಈ ವೈರಲ್ ಪೋಸ್ಟ್ ಅನ್ನು @timepassstruggler ಎಂಬ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಇದು ಓಲಾದಿಂದ ಬಂದ ಸಂದೇಶದ ಸ್ಕ್ರೀನ್‍ಶಾಟ್ ಆಗಿದೆ. ಅದರಲ್ಲಿ “ಯಮರಾಜ ಆಗಮಿಸಿದ್ದಾರೆ ಮತ್ತು ನಿಮ್ಮ ಸ್ಥಳದಲ್ಲಿ ಕಾಯುತ್ತಿದ್ದಾರೆ” ಎಂದು ಬರೆಯಲಾಗಿತ್ತು. ಈ ಬಗ್ಗೆ ನೀಡಿದ ವಿವರಣೆಯಲ್ಲಿ ಕರ್ನಾಟಕದಲ್ಲಿ ಯಾರೋ ಒಬ್ಬರು ಓಲಾ ಕ್ಯಾಬ್ ಬುಕ್ ಮಾಡಿದ್ದರು. ಆದರೆ ಚಾಲಕನ ಹೆಸರು ʼಯಮರಾಜʼ ಎಂದು ನೋಡಿದ ನಂತರ ಅದನ್ನು ರದ್ದುಗೊಳಿಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT