ಸಾಂದರ್ಭಿಕ ಚಿತ್ರ 
ರಾಜ್ಯ

Yamaraja has arrived at your location: ಡ್ರೈವರ್ ಹೆಸರು ನೋಡಿ ರೈಡ್ ಕ್ಯಾನ್ಸಲ್ ಮಾಡಿದ OLA ಪ್ರಯಾಣಿಕ!

ಯಮರಾಜ ಆಗಮಿಸಿದ್ದಾನೆ. ನಿಮ್ಮ ಲೋಕೇಶನ್‌ನಲ್ಲಿ ಕಾಯುತ್ತಿದ್ದಾರೆ(ಯಮರಾಜ ಹ್ಯಾಸ್ ಅರೈವ್ಡ್, ಈಸ್ ವೈಟಿಂಗ್ ಅಟ್ ಯುವರ್ ಲೋಕೇಶನ್) ಎಂದು ಓಲಾದಿಂದ ಸಂದೇಶ ಬಂದಿದೆ.

ಬೆಂಗಳೂರು: ಕಡಿಮೆ ದರಗಳಲ್ಲಿ, ಕುಳಿತಲ್ಲಿಂದಲೇ ಕಾರು ಬುಕಿಂಗ್ ಮಾಡಿ ಸುಲಭವಾಗಿ ಪ್ರಯಾಣ ಮಾಡಬಹುದು. ಗ್ರಾಹಕರ ಸುರಕ್ಷತೆಗೆ ಆ್ಯಪ್ ಟ್ಯಾಕ್ಸಿ ಸೇವೆಗಳು ಹಲವು ಫೀಚರ್ಸ್ ನೀಡಿದೆ. ಈ ಪೈಕಿ ರೈಡ್ ಕ್ಯಾನ್ಸಲ್ ಮಾಡುವ ಅವಕಾಶವನ್ನೂ ನೀಡಿದೆ. ಇಲ್ಲೊಬ್ಬ ಓಲಾ ಟ್ಯಾಕ್ಸಿ ಬುಕ್ ಮಾಡಿದ್ದಾನೆ. ಬಳಿಕ ಚಾಲಕನ ಹೆಸರು ನೋಡಿದ ಪ್ರಯಾಣಿಕ ರೈಡ್ ಕ್ಯಾನ್ಸಲ್ ಮಾಡಿದ್ದಾನೆ.

ಓಲಾ ಮತ್ತು ಉಬರ್‌ನಂತಹ ಕ್ಯಾಬ್ ಕಂಪನಿಗಳು ತಮ್ಮ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ರೈವರ್ ಹೆಸರುಗಳು ಮತ್ತು ಸ್ಥಳಗಳ ಬಗ್ಗೆ ಮೊದಲೇ ಮಾಹಿತಿ ನೀಡುತ್ತವೆ. ಹಾಗೇ ಇದರಲ್ಲಿ ಗ್ರಾಹಕರು ತಮ್ಮ ಬುಕಿಂಗ್ ಅನ್ನು ರದ್ದುಗೊಳಿಸುವ ಆಯ್ಕೆಯನ್ನು ಸಹ ಹೊಂದಿದ್ದಾರೆ. ಆದರೆ ಈ ಸುರಕ್ಷತೆಯ ಸೌಲಭ್ಯಗಳು ಈಗ ಕ್ಯಾಬ್ ಕಂಪನಿಗಳಿಗೆ ಸಮಸ್ಯೆಯನ್ನುಂಟುಮಾಡಿದೆ. ಯಾಕೆಂದರೆ ಕ್ಯಾಬ್ ಡ್ರೈವರ್ ಹೆಸರು ತಿಳಿದು ವ್ಯಕ್ತಿಯೊಬ್ಬ ಬುಕ್ಕಿಂಗ್ ಅನ್ನು ರದ್ದು ಮಾಡಿದ್ದಾರೆ. ಈ ವಿಷಯ ಎಲ್ಲೆಡೆ ವೈರಲ್ ಆಗಿದೆ.

ಯಮರಾಜ ಆಗಮಿಸಿದ್ದಾನೆ. ನಿಮ್ಮ ಲೋಕೇಶನ್‌ನಲ್ಲಿ ಕಾಯುತ್ತಿದ್ದಾರೆ(ಯಮರಾಜ ಹ್ಯಾಸ್ ಅರೈವ್ಡ್, ಈಸ್ ವೈಟಿಂಗ್ ಅಟ್ ಯುವರ್ ಲೋಕೇಶನ್) ಎಂದು ಓಲಾದಿಂದ ಸಂದೇಶ ಬಂದಿದೆ. ಈ ಸಂದೇಶ ನೋಡಿದ ಪ್ರಯಾಣಿಕ ರೈಡ್ ಕ್ಯಾನ್ಸಲ್ ಮಾಡಿದ್ದಾನೆ. ಬಳಿಕ ನಾನು ಮಲಗುತ್ತಿದ್ದೇನೆ ಎಂದು ಕಾರಣವನ್ನೂ ನೀಡಿದ್ದಾನೆ.

ಈ ವೈರಲ್ ಪೋಸ್ಟ್ ಅನ್ನು @timepassstruggler ಎಂಬ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಇದು ಓಲಾದಿಂದ ಬಂದ ಸಂದೇಶದ ಸ್ಕ್ರೀನ್‍ಶಾಟ್ ಆಗಿದೆ. ಅದರಲ್ಲಿ “ಯಮರಾಜ ಆಗಮಿಸಿದ್ದಾರೆ ಮತ್ತು ನಿಮ್ಮ ಸ್ಥಳದಲ್ಲಿ ಕಾಯುತ್ತಿದ್ದಾರೆ” ಎಂದು ಬರೆಯಲಾಗಿತ್ತು. ಈ ಬಗ್ಗೆ ನೀಡಿದ ವಿವರಣೆಯಲ್ಲಿ ಕರ್ನಾಟಕದಲ್ಲಿ ಯಾರೋ ಒಬ್ಬರು ಓಲಾ ಕ್ಯಾಬ್ ಬುಕ್ ಮಾಡಿದ್ದರು. ಆದರೆ ಚಾಲಕನ ಹೆಸರು ʼಯಮರಾಜʼ ಎಂದು ನೋಡಿದ ನಂತರ ಅದನ್ನು ರದ್ದುಗೊಳಿಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ