ಸಾಂದರ್ಭಿಕ ಚಿತ್ರ  
ರಾಜ್ಯ

ಹೆಚ್ಚಿದ ಡೆಂಗ್ಯೂ ಪ್ರಕರಣ: ಉತ್ತರ ಕನ್ನಡ, ಹಾಸನದಲ್ಲಿ ಮಕ್ಕಳ ಸಾವು

ಉತ್ತರ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಮೊದಲ ಬಲಿ ಪಡೆದಿದೆ. ಅಂಕೋಲದ ಬಾವಿಕೇರಿ ನಿವಾಸಿ ಹರೇರಾಮ್ ಗೋಪಾಲ್ ಭಟ್, ವಾರದಿಂದ ಬೆಳಗಾವಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದವರು ಮೃತಪಟ್ಟಿದ್ದಾರೆ.

ಬೆಂಗಳೂರು: ಮಹಾಮಾರಿ ಡೆಂಗ್ಯೂ ಜ್ವರದಿಂದ ಸಾವು-ನೋವು ರಾಜ್ಯಾದ್ಯಂತ ಹೆಚ್ಚಾಗುತ್ತಿದೆ. ನಿನ್ನೆ ಮೈಸೂರಿನಲ್ಲಿ ಆರೋಗ್ಯಾಧಿಕಾರಿಯೇ ಮೃತಪಟ್ಟ ಬೆನ್ನಲ್ಲೇ ಹಾಸನದಲ್ಲಿ 8 ವರ್ಷದ ಬಾಲಕಿ ಸಮೃದ್ಧಿ ಮೃತಪಟ್ಟಿದ್ದಾಳೆ. ಈಡಿಪಸ್ ಸೊಳ್ಳೆಗಳಿಂದ ಹರಡುತ್ತಿರುವ ಡೆಂಗ್ಯೂ ಜನರನ್ನು ಹೈರಾಣಾಗಿಸುತ್ತಿದೆ.

ನಿನ್ನೆ ಮೈಸೂರಿನಲ್ಲಿ ಸಮುದಾಯ ಆರೋಗ್ಯಾಧಿಕಾರಿಯೇ ಸೋಂಕಿಗೆ ಬಲಿಯಾಗಿದ್ದಾರೆ. ಹುಣಸೂರು ಆರೋಗ್ಯಾಧಿಕಾರಿ ನಾಗೇಂದ್ರ ಮೃತಪಟ್ಟಿದ್ದರು. ಅದರ ಬೆನ್ನಲ್ಲೇ ಹಾಸನದಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.

ಹಾಸನದಲ್ಲಿ ನಾಲ್ಕನೇ ಸಾವು: ಹಾಸನ ಜಿಲ್ಲೆಯಲ್ಲಿ ಮಕ್ಕಳು ಡೆಂಗ್ಯೂಗೆ ಬಲಿಯಾಗುತ್ತಿದ್ದಾರೆ. ಕಳೆದೊಂದು ವಾರದಲ್ಲಿ, ಹೊಳೆನರಸೀಪುರದ ಇಬ್ಬರು ಮಕ್ಕಳು, ಅರಕಲಗೂಡಿನಲ್ಲಿ ಮಗುವೊಂದು ಡೆಂಗ್ಯೂವಿನಿಂದ ಪ್ರಾಣ ಕಳೆದುಕೊಂಡಿದೆ. ಹಿಮ್ಸ್​ನಲ್ಲಿ 37 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, 8 ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಮೊದಲ ಬಲಿ ಪಡೆದಿದೆ. ಅಂಕೋಲದ ಬಾವಿಕೇರಿ ನಿವಾಸಿ ಹರೇರಾಮ್ ಗೋಪಾಲ್ ಭಟ್, ವಾರದಿಂದ ಬೆಳಗಾವಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದವರು ಮೃತಪಟ್ಟಿದ್ದಾರೆ.

ಡೆಂಗ್ಯೂ ಪ್ರಕರಣಗಳ ಏರಿಕೆ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡಿಸಿ ಹಾಗೂ ಡಿಹೆಚ್​ಓಗಳ ಜೊತೆ ವಿಧಾನಸೌಧದಲ್ಲಿ ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಜಿಲ್ಲಾಡಳಿತ, ತಾಲೂಕು, ಪಂಚಾಯ್ತಿ ಅಧಿಕಾರಿಗಳು ಡೆಂಗ್ಯೂ ನಿಯಂತ್ರಿಸಲು ಶ್ರಮ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT