ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿತಿನ್ ಗಡ್ಕರಿ 
ರಾಜ್ಯ

ರಸ್ತೆ ಕಾಮಗಾರಿಗೆ ಒಂದು ತಿಂಗಳಲ್ಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ನೀಡಲು ಸಿದ್ಧ: ನಿತಿನ್ ಗಡ್ಕರಿ

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಡಿಸೆಂಬರ್ 2024 ರ ಮೊದಲು ಪೂರ್ಣಗೊಳ್ಳಲಿದೆ ಮತ್ತು ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ಭೂಮಿ ನೀಡಿದರೆ, ವಿವಿಧ ರಸ್ತೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಒಂದು ತಿಂಗಳೊಳಗೆ ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂಪಾಯಿ ನೀಡಲು ತಮ್ಮ ಸಚಿವಾಲಯ ಸಿದ್ಧವಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ಸಮಾರೋಪ ಸಮಾರಂಭದಲ್ಲಿ ಗಡ್ಕರಿ ಮಾತನಾಡಿದರು. ಇತ್ತೀಚೆಗಷ್ಟೇ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದನ್ನು ಸ್ಮರಿಸಿದ ಗಡ್ಕರಿ, ‘ರಸ್ತೆ ಕಾಮಗಾರಿಗೆ ಒಂದು ತಿಂಗಳಲ್ಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ನೀಡಲು ಸಿದ್ಧ ಎಂದು ಹೇಳಿದ್ದೆ. ಆದರೆ ಅವರಿಗೆ ನನ್ನ ಷರತ್ತೆಂದರೆ ಭೂಸ್ವಾಧೀನ ಮಾಡಿಕೊಳ್ಳುವುದು, ಅರಣ್ಯ ಮತ್ತಿತರ ಅನುಮತಿ ಪಡೆಯುವುದು. ಇದರಿಂದ ಕರ್ನಾಟಕದಲ್ಲಿ ಹಲವು ಯೋಜನೆಗಳು ನನೆಗುದಿಗೆ ಬಿದ್ದಿವೆ. ನಾನು ಗಾಳಿಯಲ್ಲಿ ರಸ್ತೆಗಳನ್ನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಇದಲ್ಲದೆ, ರಸ್ತೆ ಯೋಜನೆಗಳ ಪ್ರಸ್ತಾಪಗಳೊಂದಿಗೆ ಕರ್ನಾಟಕದ ಅನೇಕ ಸಂಸದರು ತಮ್ಮನ್ನು ಭೇಟಿಯಾಗಲು ಬರುತ್ತಾರೆ ಎಂದು ಗಡ್ಕರಿ ಹೇಳಿದರು. ಅವರ ಬೇಡಿಕೆ ಏನೇ ಇರಲಿ, ನಾನು ಅನುಮೋದಿಸಿದ್ದೇನೆ. ಅವರಿಗಾಗಿ 3.5 ಲಕ್ಷ ಕೋಟಿ ರೂ.ಗಳ ಕಾಮಗಾರಿಯನ್ನು ಮಂಜೂರು ಮಾಡಿದ್ದೇನೆ. ನಾನು ಅವರಿಗೆ ಹೇಳುತ್ತೇನೆ, ಕೆಲಸ ಪಡೆಯಿರಿ ಮತ್ತು ನಾವು ಅದಕ್ಕೆ ಹಣ ನೀಡುತ್ತೇವೆ, ಹಣದ ಕೊರತೆ ಇಲ್ಲ ಎಂದ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಡಿಸೆಂಬರ್ 2024 ರ ಮೊದಲು ಪೂರ್ಣಗೊಳ್ಳಲಿದೆ ಮತ್ತು ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ಹೇಳಿದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಕೊಲ್ಲಲು ಪ್ರಯತ್ನಿಸಿದ್ದು ಕಾಂಗ್ರೆಸ್ ಎಂದು ಗಡ್ಕರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!