ಕೆಆರ್‌ಎಸ್ ಡ್ಯಾಂ (ಸಂಗ್ರಹ ಚಿತ್ರ)
ರಾಜ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿ; ರೈತರ ಮೊಗದಲ್ಲಿ ಮಂದಹಾಸ

ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣ ಮಳೆಯಾಗುತ್ತಿದ್ದು, ಬರಡಾಗಿದ್ದ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಮಂಡ್ಯ: ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣ ಮಳೆಯಾಗುತ್ತಿದ್ದು, ಬರಡಾಗಿದ್ದ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದೀಗ ಪ್ರಸಿದ್ಧ ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಳ ಹರಿವಿನಲ್ಲಿ ಮತ್ತಷ್ಟು ಏರಿಕೆಯಾಗಿದೆ.

ಕೊಡಗು, ಭಾಗಮಂಡಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಕನ್ನಂಬಾಡಿ ಅಣೆಕಟ್ಟೆಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿಯಾಗಿದೆ. ಕಳೆದ 15 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದೆ. ಕೆಆರ್‌ಎಸ್ ಡ್ಯಾಂ‌ಗೆ ಎರಡು ವಾರದಿಂದ ಸರಾಸರಿ 10 ಸಾವಿರ ಕ್ಯೂಸೆಕ್‌ ಒಳಹರಿವು ಆಗಿದೆ. ಇದರ ಬೆನ್ನಲ್ಲೇ ಕೆಆರ್‌ಎಸ್ ಡ್ಯಾಂ ಇದೀಗ 100 ಅಡಿ ಭರ್ತಿಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: 100 ಅಡಿ ಭರ್ತಿಯಾದ ಜೀವನಾಡಿ ಕೆಆರ್ ಎಸ್; ರೈತರ ಮೊಗದಲ್ಲಿ ಮಂದಹಾಸಯಾಗಿದೆ.

ಆರ್‌ಎಸ್ 100 ಅಡಿ ಭರ್ತಿ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡರೆ ಶೀಘ್ರ ಕೆಆರ್‌ಎಸ್ ತುಂಬಲಿದೆ.

ಕೆಆರ್‌ಎಸ್ 100 ಅಡಿ ಭರ್ತಿ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಜುಲೈ 8 ರಿಂದ ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡುವುದಾಗಿಯು ಸಹ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡರೆ ಶೀಘ್ರವಾಗಿ ಕೆಆರ್‌ಎಸ್ ಭರ್ತಿಯಾಗಲಿದೆ.

ಕೆಆರ್‌ಎಸ್‌ ಜಲಾಶಯ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ.

ಇಂದಿನ ಮಟ್ಟ - 100.30 ಅಡಿ.

ಗರಿಷ್ಠ ಸಾಂದ್ರತೆ - 49.452 ಟಿಎಂಸಿ

ಇಂದಿನ ಸಾಂದ್ರತೆ - 23.047 ಟಿಎಂಸಿ

ಒಳ ಹರಿವು - 9,686 ಕ್ಯೂಸೆಕ್

ಹೊರ ಹರಿವು - 546 ಕ್ಯೂಸೆಕ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT