ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ online desk
ರಾಜ್ಯ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳು ಆರಂಭ!

ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ನಲ್ಲಿ IX 815 ವಿಮಾನ 2522 ಕೆಜಿಗಳಷ್ಟು ಹಣ್ಣು ಹಾಗೂ ತರಕಾರಿಗಳನ್ನು ದುಬೈ ಗೆ ಕೊಂಡೊಯ್ಯುವ ಮೂಲಕ ಕಾರ್ಗೋ ಕಾರ್ಯಾಚರಣೆಗಳು ಆರಂಭವಾದವು.

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರ ರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳು ಜು.02 ರಿಂದ ಆರಂಭವಾಗಿವೆ.

ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ನಲ್ಲಿ IX 815 ವಿಮಾನ 2522 ಕೆಜಿಗಳಷ್ಟು ಹಣ್ಣು ಹಾಗೂ ತರಕಾರಿಗಳನ್ನು ದುಬೈ ಗೆ ಕೊಂಡೊಯ್ಯುವ ಮೂಲಕ ಕಾರ್ಗೋ ಕಾರ್ಯಾಚರಣೆಗಳು ಆರಂಭವಾದವು.

ಜು.05 ರಂದು ಈ ಕಾರ್ಯಾಚರಣೆಗಳಿಗೆ ವಿಧ್ಯುಕ್ತ ಚಾಲನೆ ಸಿಕ್ಕಿದ್ದು, ಎಎಎಚ್‌ಎಲ್ ಕಾರ್ಗೋ ತಂಡ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಾಯಕತ್ವ ತಂಡ ಹಾಗೂ ಕಸ್ಟಮ್ಸ್, ಏರ್‌ಲೈನ್-ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್- ಮತ್ತು ಸಿಐಎಸ್‌ಎಫ್‌ನ ಏರ್‌ಪೋರ್ಟ್ ಸೆಕ್ಯುರಿಟಿ ಗ್ರೂಪ್ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ದೇಶೀಯ ಕಾರ್ಗೋ ಕಾರ್ಯಾಚರಣೆಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳೆದ ವರ್ಷ ಮೇ.1 ರಂದು ಆರಂಭಿಸಲಾಗಿತ್ತು. ಇದಾದ ಒಂದೇ ವರ್ಷದಲ್ಲಿ ಅಂತರರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳಿಗೆ ಚಾಲನೆ ಸಿಕ್ಕಿದೆ. ಮೇ.10 ರಂದು ಕಸ್ಟಮ್ಸ್ ಕಮಿಷನರ್ ಈ ವಿಮಾನ ನಿಲ್ದಾಣದಲ್ಲಿ ಕಸ್ಟೋಡಿಯನ್ ಹಾಗೂ ಕಸ್ಟಮ್ಸ್ ಕಾರ್ಗೋ ಸೇವೆ ಒದಗಿಸುವವರನ್ನು ನೇಮಕ ಮಾಡಿದ್ದರು.

ಅಂತರರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳ ಪ್ರಾರಂಭ ಕರಾವಳಿ ಕರ್ನಾಟಕ ಮತ್ತು ಕೇರಳ ಮತ್ತು ಒಳನಾಡಿನ ರಫ್ತುದಾರರಿಗೆ ತಾಜಾ ಹಣ್ಣುಗಳು ಮತ್ತು ತರಕಾರಿಗಳು, ಆಹಾರ, ಯಂತ್ರದ ಭಾಗಗಳು, ಜವಳಿ, ಶೂಗಳು, ಉಷ್ಣವಲಯದ ಮೀನು, ಘನೀಕೃತ ಮತ್ತು ಒಣ ಮೀನು, ಪ್ಲಾಸ್ಟಿಕ್ ಬಣ್ಣ ಸಾಮಗ್ರಿಗಳು ಮತ್ತು ಹಡಗಿನ ಭಾಗಗಳನ್ನು (ಪ್ರೊಪೆಲ್ಲರ್) ರಫ್ತು ಮಾಡುವುದಕ್ಕೆ ಅನುವು ಮಾಡಿಕೊಡುತ್ತದೆ. ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ಗಳು ತಮ್ಮ ಸಂಪರ್ಕದೊಂದಿಗೆ ದುಬೈ, ದೋಹಾ, ದಮ್ಮಾಮ್, ಕುವೈತ್, ಮಸ್ಕತ್, ಅಬುಧಾಬಿ ಮತ್ತು ಬಹ್ರೇನ್‌ಗಳಿಗೆ ಸರಕುಗಳನ್ನು ಕಳುಹಿಸಲು ರಫ್ತುದಾರರಿಗೆ ಅನುವು ಮಾಡಿಕೊಡುತ್ತದೆ.

ದೇಶೀಯ ಕಾರ್ಗೋ ವಿಭಾಗದಲ್ಲಿ, ಮೇ 1, 2023 ರಿಂದ ತನ್ನ ಕಾರ್ಯಾಚರಣೆಯ ಮೊದಲ 11-ತಿಂಗಳಲ್ಲಿ 3706.02 ಟನ್ ಸರಕುಗಳನ್ನು ನಿರ್ವಹಿಸುವಲ್ಲಿ ವಿಮಾನ ನಿಲ್ದಾಣ ಉತ್ತಮವಾಗಿ ಕಾರ್ಯನಿರ್ವಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT