ರೇಣುಕಾಸ್ವಾಮಿ ಮತ್ತು ನಟ ದರ್ಶನ್ (ಸಂಗ್ರಹ ಚಿತ್ರ) 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: BBMP ಮಾಜಿ ಉಪಮೇಯರ್​ ಸೇರಿ ಮೂವರಿಗೆ ನೋಟಿಸ್ ಜಾರಿ

ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ‌ ಸೂಚಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಸೇರಿ ಮೂವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ‌ ಸೂಚಿಸಿದ್ದಾರೆ.

ಮೋಹನ್ ರಾಜ್ ರಿಂದ 40 ಲಕ್ಷ ಹಣ ಪಡೆದಿದ್ದರ ಬಗ್ಗೆ ವಿಚಾರಣೆ ವೇಳೆ ದರ್ಶನ್ ಅವರು ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯಾವ ಉದ್ದೇಶಕ್ಕಾಗಿ ದರ್ಶನ್ ಅವರಿಗೆ ಹಣ ನೀಡಲಾಗಿತ್ತು ಎಂಬುದರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಪ್ರಕರಣ ಸಂಬಂಧ ಪವಿತ್ರಾಗೌಡ ಸ್ನೇಹಿತೆ ಸಮತ ಅವರಿಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ಆರೋಪಿ ಒಬ್ಬನಿಗೆ ಹಣಕಾಸಿನ ಸಹಾಯ ಮಾಡಿರುವ ಆರೋಪ ಇವರ ಮೇಲಿದೆ.

ಬೆಂಗಳೂರಿನ ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ನೀಡಿದ್ದು. ಕಾರ್ತಿಕ್ ಪುರೋಹಿತ್ ಎಂಬ ಕಾರು ಚಾಲಕನಿಗೆ ನೋಟಿಸ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಹತ್ಯೆ ಕೇಸ್ ಆರೋಪಿ ಪ್ರದೋಷ್ ಗೆ ಆಪ್ತನಾಗಿರುವ ಕಾರ್ತಿಕ್ ಪುರೋಹಿತ್ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT