ಕಾರುಗಳ ಮಧ್ಯೆ ಅಪಘಾತ  
ರಾಜ್ಯ

Road accident: ಶಿವಮೊಗ್ಗದಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ; ಮೂವರು ಸಾವು

ಮೃತರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರಾಗಿದ್ದು, ಶಿವಮೊಗ್ಗದ ಸಿಗಂದೂರಿನಿಂದ ವಾಪಸ್ಸಾಗುತ್ತಿದ್ದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಶನಿವಾರ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ, ಅವರಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್ ನ ಲಯನ್ ಸಫಾರಿ ಬಳಿ ದುರ್ಘಟನೆ ಸಂಭವಿಸಿದೆ.

ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಇನೋವಾ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡು ಕಾರುಗಳು ತೀವ್ರ ಛಿದ್ರಗೊಂಡಿವೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಐವರಿಗೆ ಗಾಯಗಳಾಗಿವೆ.

ಮೃತರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರಾಗಿದ್ದು, ಶಿವಮೊಗ್ಗದ ಸಿಗಂದೂರಿನಿಂದ ವಾಪಸ್ಸಾಗುತ್ತಿದ್ದರು.

ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕಾರುಗಳ ಭಾಗಗಳನ್ನು ತೆರವು ಮಾಡಲಾಗಿದೆ. ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಭಿವಂಡಿಯಲ್ಲಿ ವಸತಿ ಕಟ್ಟಡ ಕುಸಿದು 6 ಸಾವು; ಅವಶೇಷಗಳ ಅಡಿಯಲ್ಲಿ 7 ಮಂದಿ ಸಿಲುಕಿರುವ ಶಂಕೆ

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!