ಬೆಂಗಳೂರು: ಕರಾವಳಿ, ಉತ್ತರ ಕನ್ನಡ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯ ಪ್ರಕಾರ ಜು.08 ರಂದೂ ಈ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ.
ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆಯಾಗಿಲ್ಲ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಜು.08) ರಂದು ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.