ಎಂಟನೇ ಆವೃತ್ತಿಯ ಮೈಸೂರು ಸಾಹಿತ್ಯೋತ್ಸವದಲ್ಲಿ ನಟ ರಮೇಶ್ ಅರವಿಂದ್, ಮೈಸೂರು ರಾಜಮನೆತನದ ಪ್ರಮೋದಾ ದೇವಿ ಒಡೆಯರ್, ಪರಿಸರವಾದಿ, ನಟ ಸುರೇಶ್ ಹುಬ್ಳಿಕರ್ ಮತ್ತು ಇತರರು ಹಾಜರಿರುವುದು. 
ರಾಜ್ಯ

'ಮೈಸೂರು ಸಾಹಿತ್ಯ ಸಂಭ್ರಮ'ಕ್ಕೆ ಚಾಲನೆ

ಮೈಸೂರು ಲಿಟ್ರರಿ ಫೋರಂ ಟ್ರಸ್ಟ್ ಮತ್ತು ಮೈಸೂರು ಬುಕ್ ಕ್ಲಬ್ಸ್ ಆಯೋಜಿಸಿದ್ದ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಚಾಲನೆ ನೀಡಿದರು.

ಮೈಸೂರು: 8ನೇ ಆವೃತ್ತಿಯ 'ಮೈಸೂರು ಸಾಹಿತ್ಯ ಸಂಭ್ರಮ'ಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಶನಿವಾರ ಚಾಲನೆ ನೀಡಿದರು.

ಮೈಸೂರು ಲಿಟ್ರರಿ ಫೋರಂ ಟ್ರಸ್ಟ್ ಮತ್ತು ಮೈಸೂರು ಬುಕ್ ಕ್ಲಬ್ಸ್ ಆಯೋಜಿಸಿದ್ದ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಚಾಲನೆ ನೀಡಿದರು.

ಉತ್ಸವದ ಆರಂಭದಲ್ಲೇ ಕಾನ್ ಚಲನಚಿತ್ರೋತ್ಸವದ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ವಿಜೇತ ಚಿತ್ರದ ನಿರ್ದೇಶಕ ಮೈಸೂರಿನ ಚಿದಾನಂದ ಎಸ್.ನಾಯಕ ಅವರನ್ನು ಸನ್ಮಾನಿಸಲಾಯಿತು. ಈವೇಳೆ ಸಾಹಿತ್ಯ- ಸಿನಿಮಾ ಪ್ರೇಮಿಗಳ ಕರತಾಡನ ಮುಗಿಲುಮುಟ್ಟಿತ್ತು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ರಮೇಶ್ ಅರವಿಂದ ಅವರು, ಓದುಗರಲ್ಲಿ ಆಸಕ್ತಿ ಮೂಡಿಸುವ ಪುಸ್ತಕ ಶ್ರೇಷ್ಠ ಗ್ರಂಥವಾಗಿದೆ. ಬಹಳಷ್ಟು ಆಲೋಚನೆಗಳು ಮತ್ತು ಪ್ರಯತ್ನಗಳನ್ನು ತರುವ ಮೂಲಕ ಪುಸ್ತಕವನ್ನು ಬರೆಯುವುದು ಕಷ್ಟದ ಕೆಲಸ. ಒಬ್ಬ ಬರಹಗಾರನು ಕಥೆಯಲ್ಲಿ ಪ್ರತಿ ವಾಕ್ಯವನ್ನು ಬರೆಯಲು ತನ್ನ ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತಾನೆ. ಬರಹಗಾರ ಮತ್ತು ಓದುಗನ ನಡುವಿನ ಸಂಪರ್ಕವು ಪ್ರತಿ ಪುಸ್ತಕದ ಸೌಂದರ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೇನ್ಸ್ ಫಿಲ್ಮ್ ಫೆಸ್ಟಿವಲ್ 2024 ರಲ್ಲಿ ಅತ್ಯುತ್ತಮ ಕಿರುಚಿತ್ರ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದ ಸನ್ ಫ್ಲವರ್ಸ್ ವರ್ ದಿ ಫರ್ಸ್ಟ್ ಒನ್ಸ್ ಟು ನೋ ಚಿತ್ರವನ್ನು ಪ್ರದರ್ಶಿಸಲಾಯಿತು.

ಇದೇ ವೇಳೆ ಸುಚೇತಾ ಸಂಜಯ್ ಅವರ ‘ಮಿರಾಕಲ್ ಟ್ರೇಸ್ ಫಾರ್ಮೇಷನ್’, ಬಿ.ಎ.ಶಾರದ ಮತ್ತು ಕುಸುಮಾ ಅವರ ‘ಹರಿದಾಸ ಕೀರ್ತನೆಗಳಲ್ಲಿ ಉಪಚಾರ ಸಾಹಿತ್ಯ’ ಮತ್ತು ಅಶ್ವಿನಿ ರಂಜನ್ ಅವರ ‘ಇನ್ ಟ್ರೂ ಕಲರ್ಸ್: ಎ ಕಾಂಪಿಲೇಷನ್ ಆಫ್ ಬ್ಲಾಯ್ ಆ್ಯಂಡ್ ವೈಟ್ ಫೋಟೋಗ್ರಾಫ್ ಆ್ಯಂಡ್ ಅಶ್ವಿನ್ಸ್ ಲೈಫ್ಟ್ ಫೇವರೈಟ್ ಮೆಮೆರೀಸ್ ಆ್ಯಂಡ್ ಸ್ಟೋರೀಸ್' ಎಂಬ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!