ಕೃಷಿ ಚಟುವಟಿಕೆ (ಸಂಗ್ರಹ ಚಿತ್ರ) 
ರಾಜ್ಯ

ಸದ್ಯಕ್ಕೆ ಕೃಷಿಗೆ ನೀರು ಬಿಡಲ್ಲ: ರೈತರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ...!

ಕೃಷಿ ಸಚಿವ ಚಲುವರಾಯಸ್ವಾಮಿಯವರು ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿಯೊಂದಿಗೆ ಶನಿವಾರ ಸಭೆ ನಡೆಸಿದರು.

ಬೆಂಗಳೂರು: ಕೃಷಿಗೆ ಸದ್ಯಕ್ಕೆ ನೀರು ಹರಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದ್ದು, ಸರ್ಕಾರದ ಈ ನಡೆ ರೈತರು ತಬ್ಬಿಬ್ಬಾಗುವಂತೆ ಮಾಡಿದೆ.

ನಿನ್ನೆಯಷ್ಟೇ ಕೃಷಿ ಸಚಿವ ಚಲುವರಾಯಸ್ವಾಮಿಯವರು ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಕಳೆದ 15 ದಿನದಿಂದ ಕೆಆರ್‌ಎಸ್‌ನಿಂದ (KRS) ವಿಸಿ ನಾಲೆಗೆ ನೀರು ಬಿಡಬೇಕು ಎಂಬ ಒತ್ತಡ ಇತ್ತು. ಈಗ ಅಲ್ಲಿ ನೀರು ಹೆಚ್ಚಾಗಿದೆ. ಮಾರ್ಚ್, ಏಪ್ರಿಲ್, ಮೇನಲ್ಲಿ ನೀರು ಬಿಡದಿರೋದ್ರಿಂದ ಜಾನುವಾರು ಹಾಗೂ ಪಕ್ಷಿಗಳಿಗೆ ಸಮಸ್ಯೆ ಆಗಿತ್ತು. ಹೀಗಾಗಿ ನೀರು ಬಿಡಬೇಕು ಎಂದು ಒತ್ತಾಯ ಬಂದಿತ್ತು. ಜುಲೈ 8 ರ ಸಂಜೆಯಿಂದ ವಿಸಿ ನಾಲೆಗೆ 15 ದಿನ ನೀರು ಬಿಡಲಾಗುತ್ತದೆ ಎಂದು ಹೇಳಿದರು.

ನೀರು ಬಿಡಬೇಕು ಎಂದು ಅಲ್ಲಿನ ಶಾಸಕರು ಒತ್ತಾಯ ಮಾಡಿದ್ದರು. ಕುಡಿಯುವ ನೀರು ಹಾಗೂ ಜಾನುವಾರುಗಳಿಗಾಗಿ ಮಾತ್ರ ನೀರು ಬಿಡುತ್ತೇವೆ. ಕೃಷಿಗೆ ಸದ್ಯಕ್ಕೆ ನೀರು ಹರಿಸೋದಿಲ್ಲ. ಸದ್ಯಕ್ಕೆ ಅಂದುಕೊಂಡಷ್ಟು ಮಳೆಯಾಗಿಲ್ಲ. ಜುಲೈ ಅಂತ್ಯಕ್ಕೆ ಪೂರ್ಣ ಪ್ರಮಾಣದ ಕ್ಲಾರಿಟಿ ಸಿಗುತ್ತೆ. ನಿತ್ಯ 3,000 ಕ್ಯೂಸೆಕ್ ನೀರು ಬಿಡುವ ಚಿಂತನೆ ಇದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT