ಕನ್ನಿಂಗ್‌ಹ್ಯಾಮ್ ರಸ್ತೆಯ ಗೋಡೆಯ ಮೇಲೆ ವಿದ್ಯುತ್ ಕೇಬಲ್‌ಗಳನ್ನು ಕಟ್ಟಿರುವುದು. 
ರಾಜ್ಯ

ತಾಯಿ-ಮಗು ಸಾವು ಬಳಿಕವೂ ಎಚ್ಚೆತ್ತುಕೊಳ್ಳದ ಸರ್ಕಾರ: ನಗರದ ಹಲವೆಡೆ ಅಪಾಯಕ್ಕೆ ಆಹ್ವಾನ ನೀಡುತ್ತಿವೆ ವಿದ್ಯುತ್‌ ತಂತಿಗಳು!

ಇಂಟರ್ನೆಟ್ ಪೂರೈಕೆದಾರರು ಹಾಕಿರುವ ಆಪ್ಟಿಕಲ್ ಫೈಬರ್ ಕೇಬಲ್‌ಗಳು ಆಗಾಗ್ಗೆ ರಸ್ತೆ ಮತ್ತು ಫುಟ್‌ಪಾತ್'ಗಳ ಮೇಲೆ ಜೋತು ಬೀಳುತ್ತಿದ್ದು, ಇದರಿಂದ ಹಲವು ಪಾದಚಾರಿಗಳು ಗಾಯಗೊಳ್ಳುತ್ತಿದ್ದಾರೆ.

ಬೆಂಗಳೂರು: ವಿದ್ಯುತ್ ತಂತಿ ತಗುಲಿ ಮಹಿಳೆ ಮತ್ತು ಆಕೆಯ 9 ತಿಂಗಳ ಪುಟ್ಟ ಮಗು ಸಾವನ್ನಪ್ಪಿ ಒಂಬತ್ತು ತಿಂಗಳು ಕಳೆದಿವೆ. ದುರಂತ ಘಟನೆ ಬಳಿಕವೂ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಈಗಲೂ ನಗರದ ಹಲವು ರಸ್ತೆಗಳಲ್ಲಿ ವಿದ್ಯುತ್‌ ಪರಿವರ್ತಕಗಳು ನೆಲಮಟ್ಟದಲ್ಲಿದ್ದು. ಅಪಾಯಕ್ಕೆ ಆಹ್ವಾನ ನೀಡುತ್ತಿವೆ.

ಇಂಟರ್ನೆಟ್ ಪೂರೈಕೆದಾರರು ಹಾಕಿರುವ ಆಪ್ಟಿಕಲ್ ಫೈಬರ್ ಕೇಬಲ್‌ಗಳು ಆಗಾಗ್ಗೆ ರಸ್ತೆ ಮತ್ತು ಫುಟ್‌ಪಾತ್'ಗಳ ಮೇಲೆ ಜೋತು ಬೀಳುತ್ತಿದ್ದು, ಇದರಿಂದ ಹಲವು ಪಾದಚಾರಿಗಳು ಗಾಯಗೊಳ್ಳುತ್ತಿದ್ದಾರೆ.

ಇದೀಗ ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಭಾಗಗಳಲ್ಲಿ ಕೇಬಲ್ ಹಾಗೂ ವಿದ್ಯುತ್ ತಂತಿಗಳು ಜೋತು ಬೀಳುತ್ತಿದ್ದು, ಇದು ಅಪಾಯ ಹೆಚ್ಚಾಗುವಂತೆ ಮಾಡಿದೆ.

ಅಶ್ವಥ್ ನಗರದ ನಿವಾಸಿ ಮಂಜುನಾಥ್ ಎಸ್ ಅವರು, ಮಡಿವಾಳದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ತಂತಿ ತಗುಲಿ ಕಣ್ಣಿಗೆ ಬಿದ್ದ ಘಟನೆಯನ್ನು ವಿವರಿಸಿದ್ದಾರೆ.

ತಂತಿ ಕೈಗೆ ಸಿಕ್ಕು ಬಿದ್ದಿದ್ದರಿಂದ ಬೈಕ್‌ನಿಂದ ಕೆಳಗೆ ಬಿದ್ದಿದ್ದೆ. ಈ ಸಮಸ್ಯೆ ಆ ರಸ್ತೆಯಲ್ಲಿ ಪದೇ ಪದೇ ಎದುರಾಗುತ್ತಲೇ ಇರುತ್ತದೆ. ಒಮ್ಮೆ ತಂತಿ ಕಣ್ಣಿಗೆ ತಗುಲಿ 1 ತಿಂಗಳ ಕಾಲ ಕೆಲಸ ಮೇಲೆ ಪರಿಣಾಮ ಬೀರುವಂತೆ ಮಾಡಿತ್ತು ಎಂದು ಹೇಳಿದ್ದಾರೆ.

ಮಳೆಯಾದಾಗ ರಾತ್ರಿ ವೇಳೆ ಕೆಲ ವಿದ್ಯುತ್ ತಂತಿಗಳು ಕಾಣುವುದೇ ಇಲ್ಲ. ಹೀಗಾಗಿ ಈ ಪ್ರದೇಶದ ಜನರು ಆತಂಕದಲ್ಲಿ ಪಾದಚಾರಿ ಮಾರ್ಗಗಳ ಬಿಟ್ಟು ರಸ್ತೆಗಳಲ್ಲಿಯೇ ನಡೆದಾಡುವಂತಾಗಿದೆ. ಈ ವೇಳೆ ವಾಹನಗಳು ಡಿಕ್ಕಿ ಹೊಡೆಯುವ ಸಾಧ್ಯತೆಗಳೂ ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಪ್ರತಿಕ್ರಿಯಿಸಿ, ನೇತಾಡುತ್ತಿರುವ ಕೇಬಲ್ ಗಳನ್ನು ಕೂಡಲೇ ಅವುಗಳನ್ನು ತೆರವುಗೊಳಿಸುತ್ತಿದ್ದೇವೆಂದು ಹೇಳಿದ್ದಾರೆ.

ನಗರದಲ್ಲಿ ಅನಧಿಕೃತ ಆಪ್ಟಿಕಲ್ ಫೈಬರ್ ಕೇಬಲ್ (OFC) ಸಂಪರ್ಕಗಳ ಘೋಷಿಸುವಂತೆ ಸೂಚಿಸಿ ಆರು ತಿಂಗಳ ಹಿಂದೆ ಇಂಟರ್ನೆಟ್ ಸೇವಾ ಪೂರೈಕೆದಾರರಿಗೆ (ISP) ಸೂಚನೆ ನೀಡಿದ್ದೆವು. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT