ಚಾಮುಂಡಿ ಉತ್ಸವ ಮೂರ್ತಿ 
ರಾಜ್ಯ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಹೋಗುವವರಿಗೆ ಉಚಿತ ಬಸ್ ಸೇವೆ!

ಆಷಾಢ ಶುಕ್ರವಾರದಂದು ಲಕ್ಷಾಂತರ ಭಕ್ತರು ಸಹ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್‌ ಇರುವುದಿಲ್ಲ.

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರು ಜಿಲ್ಲಾಡಳಿತ ಮಂಡಳಿ ಭರದ ಸಿದ್ಧತೆ ನಡೆಸಿದ್ದು, ಚಾಮುಂಡಿ ಬೆಟ್ಟಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಉಚಿತ ಬಸ್ ಸೇವೆ ಒದಗಿಸಲಿದೆ.

ಲಲಿತ ಮಹಲ್ ಅರಮನೆ ಮೈದಾನದಿಂದ ನಲವತ್ತು ಬಸ್‌ಗಳು ಸಂಚರಿಸಲಿದ್ದು, ಚಾಮುಂಡಿ ಬೆಟ್ಟದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಕೂಡ ನಗರದ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೆಶ್ವರಿಗೆ ವಿಶೇಷವಾದ ಪೂಜೆಯನ್ನ ಸಲ್ಲಿಸಲಾಗುತ್ತದೆ. ಲಕ್ಷಾಂತರ ಭಕ್ತರು ಸಹ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್‌ ಇರುವುದಿಲ್ಲ. ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಸಾಮಾನ್ಯ ಸರತಿ ಸಾಲಿನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ವಿಶೇಷ ದರ್ಶನಕ್ಕಾಗಿ 50 ಮತ್ತು 300 ರೂ ಟಿಕೆಟ್‌ಗಳನ್ನು ಸಹ ಖರೀದಿಸಬಹುದು. ಬೆಟ್ಟದಲ್ಲಿ ಎಲ್ಲಾ ಖಾಸಗಿ ವಾಹನಗಳಿಗೆ ನಿರ್ಬಂಧಿಸಲಾಗಿದ್ದು, ಉಚಿತ ಬಸ್‌ ಮೂಲಕವೇ ಪ್ರತಿಯೊಬ್ಬರು ಚಾಮುಂಡಿಬೆಟ್ಟಕ್ಕೆ ತೆರಳಬೇಕು ಎಂದು ತಿಳಿಸಿದರು.

ಪಾರ್ಕಿಂಗ್ ತೊಂದರೆ ಬಗ್ಗೆ ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಮತ್ತೊಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಹೇಳಿದ್ದೇನೆ. ಮುಂಜಾನೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿ ದರ್ಶನ ಪಡೆಯಬಹುದು ಎಂದರು.

ಡೆಂಗ್ಯೂ ಕುರಿತು ಮಾತನಾಡಿ, ಜಿಲ್ಲೆಯಲವ್ಲಿ ಡೆಂಗ್ಯೂ ನಿಯಂತ್ರಣದಲ್ಲಿದೆ. 496 ಪಾಸಿಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಾಸಿಟಿವ್ ಪ್ರಮಾಣ ಶೇ.17ರಿಂದ 10ಕ್ಕೆ ಇಳಿಕೆಯಾಗಿದ್ದು, ಕೆ.ಆರ್.ಆಸ್ಪತ್ರೆ ಮತ್ತಿತರ ಕಡೆಗಳಲ್ಲಿ ಆರೋಗ್ಯ ಇಲಾಖೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. 3,595 ಮಂದಿಗೆ ಡೆಂಗ್ಯೂ ಪರೀಕ್ಷೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಚಾಮರಾಜನಗರ ಜಿಲ್ಲೆಯ 32 ಕೆರೆಗಳಿಗೆ ನೀರು ತುಂಬಿಸಲು ಕಬಿನಿ ಜಲಾಶಯದಿಂದ ಬುಧವಾರದಿಂದ ನೀರು ಬಿಡಲು ಜಿಲ್ಲಾಡಳಿತ ನಿರ್ಧರಿಸಿದೆ. ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ನೀರಾವರಿ ಕಾಲುವೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT