ಬಿಬಿಎಂಪಿ ಕಚೇರಿ(ಸಂಗ್ರಹ ಚಿತ್ರ) 
ರಾಜ್ಯ

ನಗರದಲ್ಲಿ ಭೀತಿ ಹುಟ್ಟಿಸಿದ ಡೆಂಗ್ಯೂ: ಸ್ವಚ್ಛತೆ ಕಾಪಾಡದವರಿಗೆ 500 ರೂ ದಂಡ ವಿಧಿಸಲು BBMP ಮುಂದು!

ಖಾಸಗಿ ಜಾಗಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತಿಯಾಗುವ ಜಾಗ ಹಾಗೂ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿಮುಟ್ಟಿಸಲು ಪಾಲಿಕೆ ಹೊರಟಿದ್ದು, ಎಲ್ಲೆಂದರಲ್ಲಿ ಕಸ ಎಸೆದರೆ, ನೀರು ನಿಂತು ಸೊಳ್ಳೆ ಬಂದರೆ ಆ ಭೂಮಿ ಮಾಲೀಕರಿಗೆ ದಂಡ ವಿಧಿಸಲು ಮುಂದಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಭೀತಿ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಸ್ವಚ್ಛ ಕಾಪಾಡದ ಜನರ ಮೇಲೆ ದಂಡ ಪ್ರಯೋಗಕ್ಕೆ ಬಿಬಿಎಂಪಿ ಮುಂದಾಗಿದೆ.

ಖಾಸಗಿ ಜಾಗಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತಿಯಾಗುವ ಜಾಗ ಹಾಗೂ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿಮುಟ್ಟಿಸಲು ಪಾಲಿಕೆ ಹೊರಟಿದ್ದು, ಎಲ್ಲೆಂದರಲ್ಲಿ ಕಸ ಎಸೆದರೆ, ನೀರು ನಿಂತು ಸೊಳ್ಳೆ ಬಂದರೆ ಆ ಭೂಮಿ ಮಾಲೀಕರಿಗೆ ದಂಡ ವಿಧಿಸಲು ಮುಂದಾಗಿದೆ.

ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುನ್ಸಿಪಲ್ ಕಾಯ್ದೆ ಪ್ರಕಾರ ಅಶುಚಿತ್ವಕ್ಕೆ 50 ರೂಪಾಯಿ ದಂಡ ವಿಧಿಸುವ ಅವಕಾಶವಿದೆ. ಆದರೆ, ಇದೀಗ ಆ ದಂಡದ ಮೊತ್ತವನ್ನ 500 ರೂಪಾಯಿಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಏರಿಯಾಗಳು, ಮನೆಗಳು, ಖಾಸಗಿ ಜಾಗಗಳಲ್ಲಿ ಅಶುಚಿತ್ವ ಕಂಡು ಬಂದರೆ ಮೊದಲ ಬಾರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ದಂಡದ ಬಳಿಕವೂ ಶುಚಿತ್ವ ಕಾಪಾಡದಿದ್ದರೆ ಪ್ರತಿನಿತ್ಯ 15 ರೂ. ದಂಡ ವಿಧಿಸೋಕೆ ಪಾಲಿಕೆ ಪ್ರಸ್ತಾವನೆ ಇಟ್ಟಿದೆ. ಸದ್ಯ ಕಾನೂನಿನ ಪ್ರಕಾರ 50 ರೂಪಾಯಿಯಷ್ಟೇ ದಂಡ ವಿಧಿಸಲು ಅವಕಾಶವಿದೆ.

ದಂಡದ ಮೊತ್ತ ಹೆಚ್ಚುವ ಪ್ರಸ್ತಾಪವನ್ನು ಸರ್ಕಾರದ ಮುಂದಿಡಲಾಗಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಲು ನಗರದಲ್ಲಿ ಸುಮಾರು 14 ಲಕ್ಷ ಮನೆಗಳಿಗೆ ಭೇಟಿ ನೀಡಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ದೃಢಪಡಿಸಿದ್ದಾರೆ.

ಈ ಕ್ರಮಗಳು ಜನರ ಸುರಕ್ಷತೆಗೆ ಅತ್ಯಗತ್ಯವಾಗಿರುವುದರಿಂದ ಹೆಚ್ಚಿನ ದಂಡಗಳು ಜನರನ್ನು ಹೆಚ್ಚು ಜಾಗರೂಕರಾಗಿರುವಂತೆ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಆದರೆ, ಪಾಲಿಕೆಯ ಈ ನಿರ್ಧಾರಕ್ಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಸಾರ್ವಜನಿಕ ಸ್ಥಳಗಳಷ್ಟು ಕೊಳಕಾಗಿರುವ ಸ್ಥಳಗಳು ಬೆಂಗಳೂರಿನಲ್ಲಿ ಬೇಕಾದಷ್ಟಿವೆ. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದನ್ನೇ ಮರೆತಿರೋ ಪಾಲಿಕೆ, ಇದೀಗ ಜನಸಾಮಾನ್ಯರ ಮೇಲೆ ದಂಡ ಹಾಕಲು ಹೊರಟಿರೋದಕ್ಕೆ ಸಿಲಿಕಾನ್ ಸಿಟಿ ಜನತೆ ಆಕ್ರೋಶ ಹೊರಹೊರ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ