ಜಯ ಮೃತ್ಯುಂಜಯ ಸ್ವಾಮೀಜಿ 
ರಾಜ್ಯ

ಸಮುದಾಯಕ್ಕೆ 2ಎ ಸ್ಥಾನಮಾನಕ್ಕೆ ಒತ್ತಾಯ: ಶಾಸಕರ ಮನೆಗಳಲ್ಲಿ ಪಂಚಮಸಾಲಿ ಶ್ರೀಗಳ ಸಭೆ

ಪಂಚಮಸಾಲಿ ಮಠಾಧೀಶ ಜಯ ಮೃತ್ಯುಂಜಯ ಸ್ವಾಮೀಜಿ ವಿವಿಧ ಶಾಸಕರ ನಿವಾಸಗಳಲ್ಲಿ ಸಭೆ ನಡೆಸಲು ಆರಂಭಿಸಿದ್ದಾರೆ, ಭಾನುವಾರ ತೇರದಾಳ ಶಾಸಕ ಸಿದ್ದು ಸವದಿ ಅವರ ನಿವಾಸದಲ್ಲಿ ಸಭೆ ನಡೆಯಿತು.

ಬೆಂಗಳೂರು: ಪಂಚಮಸಾಲಿಗಳನ್ನು ಹಿಂದುಳಿದ ವರ್ಗ ಎಂದು ಗುರುತಿಸಿ 2 ಎ ಮೀಸಲು ಸ್ಥಾನಮಾನ ನೀಡುವಂತೆ ಮತ್ತೆ ಒತ್ತಡ ಹೇರಲು ಆರಂಭಿಸಿದ್ದಾರೆ.

ಪಂಚಮಸಾಲಿ ಮಠಾಧೀಶ ಜಯ ಮೃತ್ಯುಂಜಯ ಸ್ವಾಮೀಜಿ ವಿವಿಧ ಶಾಸಕರ ನಿವಾಸಗಳಲ್ಲಿ ಸಭೆ ನಡೆಸಲು ಆರಂಭಿಸಿದ್ದಾರೆ, ಭಾನುವಾರ ತೇರದಾಳ ಶಾಸಕ ಸಿದ್ದು ಸವದಿ ಅವರ ನಿವಾಸದಲ್ಲಿ ಸಭೆ ನಡೆಯಿತು.

ಪಂಚಮಸಾಲಿ ಮುಖಂಡರು ಹಾಗೂ ಶಾಸಕರಾದ ವಿನಯ್‌ ಕುಲಕರ್ಣಿ, ಅರವಿಂದ ಬೆಲ್ಲದ್‌, ಎಂ.ಆರ್‌.ಪಾಟೀಲ್‌ ಅವರ ನಿವಾಸದಲ್ಲಿ ಈ ಹಿಂದೆ ಸಭೆ ನಡೆಸಲಾಗಿತ್ತು. ಸದ್ಯದಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆಯಲ್ಲಿಯೂ ಸಭೆ ನಡೆಯಲಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತ ಮಾತನಾಡಿದ ಮೃತ್ಯುಂಜಯ ಸ್ವಾಮೀಜಿ “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ ಮತ್ತು ಅದು ನಮ್ಮ ಬೇಡಿಕೆಗಳಿಗೆ ಪೂರ್ವಭಾವಿಯಾಗಿ ಸ್ಪಂದಿಸಲಿಲ್ಲ. ಮುಂಬೈ-ಕರ್ನಾಟಕ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿಲ್ಲ ಹೀಗಾಗಿ ಅವರು ಮರುಚಿಂತನೆ ಮಾಡಬೇಕಾಗಿದೆ ಎಂದಿದ್ದಾರೆ.

ವಿಧಾನಸಭೆಯಲ್ಲಿ 20 ಪಂಚಮಸಾಲಿ ಸದಸ್ಯರಿದ್ದಾರೆ. ಅವರಲ್ಲಿ 11 ಕಾಂಗ್ರೆಸ್, 8 ಬಿಜೆಪಿ ಮತ್ತು ಒಬ್ಬರು ಜೆಡಿಎಸ್‌ ಶಾಸಕರಾಗಿದ್ದಾರೆ. ಸಮುದಾಯವು ಹಿಂದುಳಿದಿರುವುದನ್ನು ಸಾಬೀತುಪಡಿಸಿದರೆ ಅವರಿಗೂ ಮೀಸಲಾತಿ ಸಿಗುತ್ತದೆ ಎಂದು ಕೆಲವು ಹಿಂದುಳಿದ ವರ್ಗಗಳ ಚಳವಳಿಯ ಮುಖಂಡರು ಹೇಳಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ