ಡಿ ಕೆ ಶಿವಕುಮಾರ್ 
ರಾಜ್ಯ

ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ-ಶಾಸಕರ ಪಾತ್ರವಿಲ್ಲ; ಅಧಿಕಾರಿಗಳಿಂದ ಹಣ ದುರ್ಬಳಕೆ: ಡಿ.ಕೆ ಶಿವಕುಮಾರ್

ಗಿರಿಜನ ಕಲ್ಯಾಣ ಮಂಡಳಿಯಲ್ಲಿ ಹಣ ದುರುಪಯೋಗ ಮತ್ತು ದುರ್ಬಳಕೆ ನಡೆದಿರುವುದನ್ನು ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ.

ಬೆಂಗಳೂರು: ಗಿರಿಜನ ಕಲ್ಯಾಣ ಮಂಡಳಿಯಲ್ಲಿ ಹಣ ದುರುಪಯೋಗ ಮತ್ತು ದುರ್ಬಳಕೆ ನಡೆದಿರುವುದನ್ನು ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಆದಿವಾಸಿ ಕಲ್ಯಾಣ ಮಂಡಳಿಯಲ್ಲಿ ಅಧಿಕಾರಿಗಳಿಂದ ಹಣ ದುರುಪಯೋಗ ಆಗಿರುವುದು ನಿಜ. ಈ ಸಂಬಂಧ ನಮ್ಮ ಸಚಿವರ ಜತೆ ಮಾತನಾಡಿದ್ದೇವೆ. ಆದರೆ ಅವರು ತಾವು ಯಾವುದೇ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸಚಿವರಾಗಿ ತನಿಖೆ ಎದುರಿಸುವುದು ಒಳ್ಳೆಯದಲ್ಲ ಎಂದು ಸ್ವಯಂ ಪ್ರೇರಿತರಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅಧಿಕಾರಿಗಳ ಮುಂದೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ, ಅವರು ತನಿಖೆ ನಡೆಸಲಿ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಹಗರಣದಲ್ಲಿ ನಮ್ಮ ಸಚಿವರು ಮತ್ತು ಶಾಸಕರ ಕೈವಾಡವಿಲ್ಲ ಆದರೆ ಇದರಲ್ಲಿ ಬೇರೆಯವರು ಶಾಮೀಲಾಗಿದ್ದಾರೆಯ. ನಾವು ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಸುತ್ತೇವೆ ಎಂದು ಶಿವಕುಮಾರ್ ಹೇಳಿದ್ದಾರೆ.

ಏತನ್ಮಧ್ಯೆ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ, ಏಳನೇ ಆರೋಪಿ ಪದ್ಮನಾಭ್ ಮತ್ತು ಅಕೌಂಟೆಂಟ್, ಎಂಟನೇ ಆರೋಪಿ ಪರಶುರಾಮ್ ಅವರಿಗೆ ಸೇರಿದ ಆಡಿಯೋ ಕ್ಲಿಪ್ ಹೊರಬಿದ್ದಿದೆ. ಆಡಿಯೋ ಕ್ಲಿಪ್‌ನಲ್ಲಿ, ಈ ವಿಷಯವನ್ನು ಮಂಡಳಿಯ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸವರಾಜ ದಡ್ಡಲ್ ಅವರ ಗಮನಕ್ಕೆ ತರಬೇಕು ಎಂದು ಪರಶುರಾಮ್ ಹೇಳಿದ್ದಾರೆ. ಈಗ ಹೇಳಿದರೆ ಗಲಾಟೆಯಾಗುತ್ತದೆ ಎಂದು ಉತ್ತರಿಸಿರುವ ಪದ್ಮನಾಭ್, ಇನ್ನು ಕೆಲವು ದಿನ ಸುಮ್ಮನಿರಲು ಕೇಳಿಕೊಂಡಿದ್ದಾರೆ. ಪದ್ಮನಾಭ್ ಅವರು "ಸಚಿವರಿಂದ ಮತ್ತು ಅವರ ಆಪ್ತ ಸಹಾಯಕರಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.

ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ಬುಡಕಟ್ಟು ಕಲ್ಯಾಣ ಮಂಡಳಿಯ 187 ಕೋಟಿ ರೂಪಾಯಿ ಹಣವನ್ನು ತೆಲಂಗಾಣ ಮತ್ತು ಇತರ ರಾಜ್ಯಗಳ ಚುನಾವಣೆಗಾಗಿ ಬಳಸಲಾಗಿದೆ ಎಂದು ಆರೋಪಿಸಿದೆ. ಹಿರಿಯ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಹಗರಣ ಬಯಲಾಗಿತ್ತು.

ಡೆಂಗ್ಯೂ ಪ್ರಕರಣ ಹೆಚ್ಚಳದ ಬಗ್ಗ ಮಾತನಾಡಿದ ಡಿಸಿಎಂ ಎಲ್ಲೆಂದರಲ್ಲಿ ಕಸ ಎಸೆಯುವವವರ ಪ್ರಮಾಣ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮೆರ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು. ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಕಾರಣಕ್ಕೆ ಎಲ್ ಇಡಿ ವಿದ್ಯುತ್ ದೀಪದ ಕಂಬಗಳಿಗೆ ಸಿಸಿಟಿವಿ ಕ್ಯಾಮೆರ ಅಳವಡಿಸಲು ಸೂಚನೆ ನೀಡಲಾಗಿದೆ.

ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ. ಡೆಂಗ್ಯೂ ನಿಯಂತ್ರಣಕ್ಕೆ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ.

ರಾಮನಗರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಅನುಮತಿ ಸಿಕ್ಕಿಲ್ಲ ಎಂಬ ಪ್ರಶ್ನೆಗೆ, “ರಾಮನಗರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ತರಬೇಕು ಎಂಬುದು ನಮ್ಮೆಲ್ಲರ ಬೇಡಿಕೆಯಾಗಿತ್ತು. ಈ ವಿಚಾರವನ್ನು ಬಜೆಟ್ ನಲ್ಲೂ ಸೇರಿಸಲಾಗಿತ್ತು. ಸಿಬ್ಬಂದಿ ಕೊರತೆ ಎಂದು ಅನುಮತಿ ನೀಡಿಲ್ಲ ಎಂಬ ವಿಚಾರ ತಿಳಿಸಿದ್ದು, ಈ ಬಗ್ಗೆ ಗಮನಹರಿಸುತ್ತೇವೆ” ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT