ಸಿಎಂ ಸಿದ್ದರಾಮಯ್ಯ ಸಭೆ 
ರಾಜ್ಯ

ರಸ್ತೆ ಅಪಘಾತ: ರಾಜ್ಯದಲ್ಲಿ 1 ವರ್ಷದಲ್ಲಿ 9,943 ಮಂದಿ ಸಾವು; ಸಿಎಂ ಸಿದ್ದರಾಮಯ್ಯ ಕಳವಳ

ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9,943 ಜನರು ಸಾವನ್ನಪ್ಪಿದ್ದಾರೆ. ಈ ಬೆಳವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ,

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಅವರು, ‘ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಹೇಳಿದರು.

ಇದೇ ವೇಳೆ ಜಿಲ್ಲಾ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಸೂಚನೆ ನೀಡಿದರು.

‘ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು’ ಎಂದು ಸಲಹೆ ನೀಡಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT